MIRROR FOCUS

ಚೀನಾ ಏಕಾಏಕಿಯಾಗಿ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಏಕೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೀನಾವು ಕಳೆದ ಕೆಲವು ಸಮಯಗಳಿಂದ ಎಳೆ ಅಡಿಕೆಯನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತಿದೆ. ವಿಯೆಟ್ನಾಂನಂತಹ ಪ್ರದೇಶದಲ್ಲೂ ಈಗ ಅಡಿಕೆ ಜನಪ್ರಿಯವಾಗಲು ತೊಡಗಿದೆ. ಅಡಿಕೆ ಎನ್ನುವುದು ಚಿನ್ನದ ಬೆಳೆ ಎಂಬ ಮಟ್ಟಿಗೆ ಬರುತ್ತಿದೆ. ಅಷ್ಟಕ್ಕೂ ಚೀನಾ ಏಕೆ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವುದು ಬಹಳ ಕುತೂಹಲದ ವಿಷಯವಾಗಿದೆ.

Advertisement

ವಿಯೆಟ್ನಾಂನಲ್ಲಿ ಅಡಿಕೆ ಧಾರಣೆ ಏರಿಕೆಯಾಗಿದೆ. ಅಲ್ಲಿನ ವ್ಯಾಪಾರಿಗಳ ಪ್ರಕಾರ, ಚೀನಾ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಅಡಿಕೆ ಬೆಲೆ ತೀವ್ರವಾಗಿ ಹೆಚ್ಚಾಗಿದೆ. ಅಡಿಕೆಗಳನ್ನು ಚೀನಾಕ್ಕೆ ರಫ್ತು ಮಾಡುವ ಕಾರಣದಿಂದಲೇ ಅಡಿಕೆ ಧಾರಣೆ ಏರಿಕೆಯಾಗಿದೆ. ಆದರೆ ಚೀನಾವು ಆ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿರುವುದು ಏಕೆ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಚೀನಾದಲ್ಲಿಅಡಿಕೆಯ ಉತ್ಪನ್ನಗಳು ಹೆಚ್ಚಾಗಿ ಈಗ ತಯಾರಿಕೆ ಆರಂಭವಾಗಿದೆ. ಆದರೆ ಅಡಿಕೆ ಬೆಳೆಯುವ ಚೀನಾದಲ್ಲಿ ಕೂಡಾ ಈಗ ಅಡಿಕೆ ಹಲವು ಕಾರಣಗಳಿಂದ ಇಳುವರಿ ನಷ್ಟ ಹಾಗೂ ರೋಗಗಳಿಗೆ ತುತ್ತಾಗಿದೆ.

ಚೀನಾದಲ್ಲಿ, ಸುಮಾರು 95% ಅಡಿಕೆ ಉತ್ಪಾದನೆಯನ್ನು ಹೈನಾನ್ ದ್ವೀಪದಲ್ಲಿ ಬೆಳೆಯಲಾಗುತ್ತದೆ. 2021 ರಲ್ಲಿ, ಹೈನಾನ್‌ನ ಅಡಿಕೆ ಬೆಳೆಯುವ ಪ್ರದೇಶವು 2,5 ಮಿಲಿಯನ್ ಎಕರೆಗಳಷ್ಟಿತ್ತು, ಇದು 276.200 ಟನ್‌ಗಳ ಉತ್ಪಾದನೆಗೆ ಕಾರಣವಾಗಿತ್ತು. ಹೈನಾನ್‌ನಲ್ಲಿನ ಅಡಿಕೆಗಳನ್ನು ವಾನ್ನಿಂಗ್ ಸಿಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಅಲ್ಲಿ ಜನಸಂಖ್ಯೆಯ ಅರ್ಧದಷ್ಟು ಜನರು  ಅಡಿಕೆ ಬೆಳೆಗಾರರು ಇದ್ದಾರೆ.ಇತ್ತೀಚಿನ ವರ್ಷಗಳಲ್ಲಿ, ಹಳದಿ ಎಲೆ ರೋಗದಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಸ್ಥಳೀಯ ಅಡಿಕೆ ಉತ್ಪಾದನೆಯು ತೀವ್ರವಾಗಿ ಕುಸಿದಿದೆ. ಈ ಬಾರಿ ಹೈನಾನ್ ದ್ವೀಪವನ್ನು ಅಪ್ಪಳಿಸಿದ ಚಂಡಮಾರುತ ಕಾರಣದಿಂದಲೂ ಅಡಿಕೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ.

ಆದರೆ ಅಡಿಕೆಯನ್ನು ಉಪಯೋಗಿಸಿ ಹಲವು ಉತ್ಪನ್ನಗಳಿಗೆ ಈಗ ಅಡಿಕೆಯ ಕೊರತೆ ಇದೆ. ಈ ಕಾರಣದಿಂದ ಅಡಿಕೆ ಧಾರಣೆ ಏರಿಕೆಯಾಗಿದೆ. ಚೀನಾದಲ್ಲಿ, ಅಡಿಕೆಯನ್ನು  ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು… ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಹೆಚ್ಚಾಗಿ ಬಳಕೆಯನ್ನೂ ಮಾಡುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

1 hour ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

4 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

5 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

13 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

14 hours ago