ಚೀನಾವು ಕಳೆದ ಕೆಲವು ಸಮಯಗಳಿಂದ ಎಳೆ ಅಡಿಕೆಯನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತಿದೆ. ವಿಯೆಟ್ನಾಂನಂತಹ ಪ್ರದೇಶದಲ್ಲೂ ಈಗ ಅಡಿಕೆ ಜನಪ್ರಿಯವಾಗಲು ತೊಡಗಿದೆ. ಅಡಿಕೆ ಎನ್ನುವುದು ಚಿನ್ನದ ಬೆಳೆ ಎಂಬ ಮಟ್ಟಿಗೆ ಬರುತ್ತಿದೆ. ಅಷ್ಟಕ್ಕೂ ಚೀನಾ ಏಕೆ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವುದು ಬಹಳ ಕುತೂಹಲದ ವಿಷಯವಾಗಿದೆ.
ವಿಯೆಟ್ನಾಂನಲ್ಲಿ ಅಡಿಕೆ ಧಾರಣೆ ಏರಿಕೆಯಾಗಿದೆ. ಅಲ್ಲಿನ ವ್ಯಾಪಾರಿಗಳ ಪ್ರಕಾರ, ಚೀನಾ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಅಡಿಕೆ ಬೆಲೆ ತೀವ್ರವಾಗಿ ಹೆಚ್ಚಾಗಿದೆ. ಅಡಿಕೆಗಳನ್ನು ಚೀನಾಕ್ಕೆ ರಫ್ತು ಮಾಡುವ ಕಾರಣದಿಂದಲೇ ಅಡಿಕೆ ಧಾರಣೆ ಏರಿಕೆಯಾಗಿದೆ. ಆದರೆ ಚೀನಾವು ಆ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿರುವುದು ಏಕೆ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಚೀನಾದಲ್ಲಿಅಡಿಕೆಯ ಉತ್ಪನ್ನಗಳು ಹೆಚ್ಚಾಗಿ ಈಗ ತಯಾರಿಕೆ ಆರಂಭವಾಗಿದೆ. ಆದರೆ ಅಡಿಕೆ ಬೆಳೆಯುವ ಚೀನಾದಲ್ಲಿ ಕೂಡಾ ಈಗ ಅಡಿಕೆ ಹಲವು ಕಾರಣಗಳಿಂದ ಇಳುವರಿ ನಷ್ಟ ಹಾಗೂ ರೋಗಗಳಿಗೆ ತುತ್ತಾಗಿದೆ.
ಚೀನಾದಲ್ಲಿ, ಸುಮಾರು 95% ಅಡಿಕೆ ಉತ್ಪಾದನೆಯನ್ನು ಹೈನಾನ್ ದ್ವೀಪದಲ್ಲಿ ಬೆಳೆಯಲಾಗುತ್ತದೆ. 2021 ರಲ್ಲಿ, ಹೈನಾನ್ನ ಅಡಿಕೆ ಬೆಳೆಯುವ ಪ್ರದೇಶವು 2,5 ಮಿಲಿಯನ್ ಎಕರೆಗಳಷ್ಟಿತ್ತು, ಇದು 276.200 ಟನ್ಗಳ ಉತ್ಪಾದನೆಗೆ ಕಾರಣವಾಗಿತ್ತು. ಹೈನಾನ್ನಲ್ಲಿನ ಅಡಿಕೆಗಳನ್ನು ವಾನ್ನಿಂಗ್ ಸಿಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಅಲ್ಲಿ ಜನಸಂಖ್ಯೆಯ ಅರ್ಧದಷ್ಟು ಜನರು ಅಡಿಕೆ ಬೆಳೆಗಾರರು ಇದ್ದಾರೆ.ಇತ್ತೀಚಿನ ವರ್ಷಗಳಲ್ಲಿ, ಹಳದಿ ಎಲೆ ರೋಗದಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಸ್ಥಳೀಯ ಅಡಿಕೆ ಉತ್ಪಾದನೆಯು ತೀವ್ರವಾಗಿ ಕುಸಿದಿದೆ. ಈ ಬಾರಿ ಹೈನಾನ್ ದ್ವೀಪವನ್ನು ಅಪ್ಪಳಿಸಿದ ಚಂಡಮಾರುತ ಕಾರಣದಿಂದಲೂ ಅಡಿಕೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ.
ಆದರೆ ಅಡಿಕೆಯನ್ನು ಉಪಯೋಗಿಸಿ ಹಲವು ಉತ್ಪನ್ನಗಳಿಗೆ ಈಗ ಅಡಿಕೆಯ ಕೊರತೆ ಇದೆ. ಈ ಕಾರಣದಿಂದ ಅಡಿಕೆ ಧಾರಣೆ ಏರಿಕೆಯಾಗಿದೆ. ಚೀನಾದಲ್ಲಿ, ಅಡಿಕೆಯನ್ನು ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು… ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಹೆಚ್ಚಾಗಿ ಬಳಕೆಯನ್ನೂ ಮಾಡುತ್ತಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…