Advertisement
MIRROR FOCUS

ಚೀನಾ ಏಕಾಏಕಿಯಾಗಿ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಏಕೆ..?

Share

ಚೀನಾವು ಕಳೆದ ಕೆಲವು ಸಮಯಗಳಿಂದ ಎಳೆ ಅಡಿಕೆಯನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತಿದೆ. ವಿಯೆಟ್ನಾಂನಂತಹ ಪ್ರದೇಶದಲ್ಲೂ ಈಗ ಅಡಿಕೆ ಜನಪ್ರಿಯವಾಗಲು ತೊಡಗಿದೆ. ಅಡಿಕೆ ಎನ್ನುವುದು ಚಿನ್ನದ ಬೆಳೆ ಎಂಬ ಮಟ್ಟಿಗೆ ಬರುತ್ತಿದೆ. ಅಷ್ಟಕ್ಕೂ ಚೀನಾ ಏಕೆ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವುದು ಬಹಳ ಕುತೂಹಲದ ವಿಷಯವಾಗಿದೆ.

ವಿಯೆಟ್ನಾಂನಲ್ಲಿ ಅಡಿಕೆ ಧಾರಣೆ ಏರಿಕೆಯಾಗಿದೆ. ಅಲ್ಲಿನ ವ್ಯಾಪಾರಿಗಳ ಪ್ರಕಾರ, ಚೀನಾ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಅಡಿಕೆ ಬೆಲೆ ತೀವ್ರವಾಗಿ ಹೆಚ್ಚಾಗಿದೆ. ಅಡಿಕೆಗಳನ್ನು ಚೀನಾಕ್ಕೆ ರಫ್ತು ಮಾಡುವ ಕಾರಣದಿಂದಲೇ ಅಡಿಕೆ ಧಾರಣೆ ಏರಿಕೆಯಾಗಿದೆ. ಆದರೆ ಚೀನಾವು ಆ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿರುವುದು ಏಕೆ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಚೀನಾದಲ್ಲಿಅಡಿಕೆಯ ಉತ್ಪನ್ನಗಳು ಹೆಚ್ಚಾಗಿ ಈಗ ತಯಾರಿಕೆ ಆರಂಭವಾಗಿದೆ. ಆದರೆ ಅಡಿಕೆ ಬೆಳೆಯುವ ಚೀನಾದಲ್ಲಿ ಕೂಡಾ ಈಗ ಅಡಿಕೆ ಹಲವು ಕಾರಣಗಳಿಂದ ಇಳುವರಿ ನಷ್ಟ ಹಾಗೂ ರೋಗಗಳಿಗೆ ತುತ್ತಾಗಿದೆ.

Advertisement

ಚೀನಾದಲ್ಲಿ, ಸುಮಾರು 95% ಅಡಿಕೆ ಉತ್ಪಾದನೆಯನ್ನು ಹೈನಾನ್ ದ್ವೀಪದಲ್ಲಿ ಬೆಳೆಯಲಾಗುತ್ತದೆ. 2021 ರಲ್ಲಿ, ಹೈನಾನ್‌ನ ಅಡಿಕೆ ಬೆಳೆಯುವ ಪ್ರದೇಶವು 2,5 ಮಿಲಿಯನ್ ಎಕರೆಗಳಷ್ಟಿತ್ತು, ಇದು 276.200 ಟನ್‌ಗಳ ಉತ್ಪಾದನೆಗೆ ಕಾರಣವಾಗಿತ್ತು. ಹೈನಾನ್‌ನಲ್ಲಿನ ಅಡಿಕೆಗಳನ್ನು ವಾನ್ನಿಂಗ್ ಸಿಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಅಲ್ಲಿ ಜನಸಂಖ್ಯೆಯ ಅರ್ಧದಷ್ಟು ಜನರು  ಅಡಿಕೆ ಬೆಳೆಗಾರರು ಇದ್ದಾರೆ.ಇತ್ತೀಚಿನ ವರ್ಷಗಳಲ್ಲಿ, ಹಳದಿ ಎಲೆ ರೋಗದಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಸ್ಥಳೀಯ ಅಡಿಕೆ ಉತ್ಪಾದನೆಯು ತೀವ್ರವಾಗಿ ಕುಸಿದಿದೆ. ಈ ಬಾರಿ ಹೈನಾನ್ ದ್ವೀಪವನ್ನು ಅಪ್ಪಳಿಸಿದ ಚಂಡಮಾರುತ ಕಾರಣದಿಂದಲೂ ಅಡಿಕೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ.

ಆದರೆ ಅಡಿಕೆಯನ್ನು ಉಪಯೋಗಿಸಿ ಹಲವು ಉತ್ಪನ್ನಗಳಿಗೆ ಈಗ ಅಡಿಕೆಯ ಕೊರತೆ ಇದೆ. ಈ ಕಾರಣದಿಂದ ಅಡಿಕೆ ಧಾರಣೆ ಏರಿಕೆಯಾಗಿದೆ. ಚೀನಾದಲ್ಲಿ, ಅಡಿಕೆಯನ್ನು  ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು… ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಹೆಚ್ಚಾಗಿ ಬಳಕೆಯನ್ನೂ ಮಾಡುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

19 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

19 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago