Advertisement
MIRROR FOCUS

ಚೀನಾ ಏಕಾಏಕಿಯಾಗಿ ಅಡಿಕೆ ಆಮದು ಮಾಡಿಕೊಳ್ಳುತ್ತಿರುವುದು ಏಕೆ..?

Share

ಚೀನಾವು ಕಳೆದ ಕೆಲವು ಸಮಯಗಳಿಂದ ಎಳೆ ಅಡಿಕೆಯನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳುತ್ತಿದೆ. ವಿಯೆಟ್ನಾಂನಂತಹ ಪ್ರದೇಶದಲ್ಲೂ ಈಗ ಅಡಿಕೆ ಜನಪ್ರಿಯವಾಗಲು ತೊಡಗಿದೆ. ಅಡಿಕೆ ಎನ್ನುವುದು ಚಿನ್ನದ ಬೆಳೆ ಎಂಬ ಮಟ್ಟಿಗೆ ಬರುತ್ತಿದೆ. ಅಷ್ಟಕ್ಕೂ ಚೀನಾ ಏಕೆ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ ಎನ್ನುವುದು ಬಹಳ ಕುತೂಹಲದ ವಿಷಯವಾಗಿದೆ.

ವಿಯೆಟ್ನಾಂನಲ್ಲಿ ಅಡಿಕೆ ಧಾರಣೆ ಏರಿಕೆಯಾಗಿದೆ. ಅಲ್ಲಿನ ವ್ಯಾಪಾರಿಗಳ ಪ್ರಕಾರ, ಚೀನಾ ಮಾರುಕಟ್ಟೆಯಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಅಡಿಕೆ ಬೆಲೆ ತೀವ್ರವಾಗಿ ಹೆಚ್ಚಾಗಿದೆ. ಅಡಿಕೆಗಳನ್ನು ಚೀನಾಕ್ಕೆ ರಫ್ತು ಮಾಡುವ ಕಾರಣದಿಂದಲೇ ಅಡಿಕೆ ಧಾರಣೆ ಏರಿಕೆಯಾಗಿದೆ. ಆದರೆ ಚೀನಾವು ಆ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿರುವುದು ಏಕೆ ಎನ್ನುವ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಚೀನಾದಲ್ಲಿಅಡಿಕೆಯ ಉತ್ಪನ್ನಗಳು ಹೆಚ್ಚಾಗಿ ಈಗ ತಯಾರಿಕೆ ಆರಂಭವಾಗಿದೆ. ಆದರೆ ಅಡಿಕೆ ಬೆಳೆಯುವ ಚೀನಾದಲ್ಲಿ ಕೂಡಾ ಈಗ ಅಡಿಕೆ ಹಲವು ಕಾರಣಗಳಿಂದ ಇಳುವರಿ ನಷ್ಟ ಹಾಗೂ ರೋಗಗಳಿಗೆ ತುತ್ತಾಗಿದೆ.

ಚೀನಾದಲ್ಲಿ, ಸುಮಾರು 95% ಅಡಿಕೆ ಉತ್ಪಾದನೆಯನ್ನು ಹೈನಾನ್ ದ್ವೀಪದಲ್ಲಿ ಬೆಳೆಯಲಾಗುತ್ತದೆ. 2021 ರಲ್ಲಿ, ಹೈನಾನ್‌ನ ಅಡಿಕೆ ಬೆಳೆಯುವ ಪ್ರದೇಶವು 2,5 ಮಿಲಿಯನ್ ಎಕರೆಗಳಷ್ಟಿತ್ತು, ಇದು 276.200 ಟನ್‌ಗಳ ಉತ್ಪಾದನೆಗೆ ಕಾರಣವಾಗಿತ್ತು. ಹೈನಾನ್‌ನಲ್ಲಿನ ಅಡಿಕೆಗಳನ್ನು ವಾನ್ನಿಂಗ್ ಸಿಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಅಲ್ಲಿ ಜನಸಂಖ್ಯೆಯ ಅರ್ಧದಷ್ಟು ಜನರು  ಅಡಿಕೆ ಬೆಳೆಗಾರರು ಇದ್ದಾರೆ.ಇತ್ತೀಚಿನ ವರ್ಷಗಳಲ್ಲಿ, ಹಳದಿ ಎಲೆ ರೋಗದಿಂದ ಅಡಿಕೆ ಇಳುವರಿ ಕಡಿಮೆಯಾಗಿದೆ. ಸ್ಥಳೀಯ ಅಡಿಕೆ ಉತ್ಪಾದನೆಯು ತೀವ್ರವಾಗಿ ಕುಸಿದಿದೆ. ಈ ಬಾರಿ ಹೈನಾನ್ ದ್ವೀಪವನ್ನು ಅಪ್ಪಳಿಸಿದ ಚಂಡಮಾರುತ ಕಾರಣದಿಂದಲೂ ಅಡಿಕೆ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ.

ಆದರೆ ಅಡಿಕೆಯನ್ನು ಉಪಯೋಗಿಸಿ ಹಲವು ಉತ್ಪನ್ನಗಳಿಗೆ ಈಗ ಅಡಿಕೆಯ ಕೊರತೆ ಇದೆ. ಈ ಕಾರಣದಿಂದ ಅಡಿಕೆ ಧಾರಣೆ ಏರಿಕೆಯಾಗಿದೆ. ಚೀನಾದಲ್ಲಿ, ಅಡಿಕೆಯನ್ನು  ಜೀರ್ಣಕಾರಿ, ಚೂಯಿಂಗ್ ಗಮ್, ಎನರ್ಜಿ ಡ್ರಿಂಕ್ಸ್, ತಿಂಡಿಗಳು… ಸೇರಿದಂತೆ ಕೆಲವು ಉತ್ಪನ್ನಗಳ ತಯಾರಿಕೆ ಬಳಕೆ ಮಾಡಲಾಗುತ್ತಿದೆ. ಅದೆಲ್ಲವೂ ಈಗ ಬೇಡಿಕೆಯ ವಸ್ತುವಾಗಿದೆ. ಹೀಗಾಗಿ ಚೀನಾ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಹೆಚ್ಚಾಗಿ ಬಳಕೆಯನ್ನೂ ಮಾಡುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

17 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago