ಹವಾಮಾನ ವರದಿ | 31-12-2025 | ಸದ್ಯ ಮೋಡದ ಪರಿಸ್ಥಿತಿ ಏಕೆ..? ಮಳೆಯಾಗಬಹುದೇ..? ಇನ್ನು ಚಳಿ ಹೇಗಿದೆ..?

December 31, 2025
2:02 PM

01.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಈಗಿನಂತೆ ಈ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಲಕ್ಷಣಗಳಿವೆ. ನಂತರ ಮೋಡ ಕಡಿಮೆಯಾದರೂ ಚಳಿಯ ವಾತಾವರಣ ಆವರಿಸಲು ಸ್ವಲ್ಪ ಸಮಯ ಬೇಕಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮೋಡದ ವಾತಾವರಣವು 2026 ಜನವರಿ 4ರ ತನಕ ಮುಂದುವರಿಯಬಹುದು.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ವಿರಳವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಛಳಿಯ ಪ್ರಮಾಣವು ಕಡಿಮೆಯಾಗಲಿದೆ.  ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜನವರಿ 3ರ ತನಕ ಈ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ.  ಈಗಿನಂತೆ ದಕ್ಷಿಣ ಒಳನಾಡಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಜನವರಿ 1ರಂದು ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈ ವಾತಾವರಣವು 2026ರ ಜನವರಿ 3ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. …… ಮುಂದೆ ಓದಿ……

Advertisement

ಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾದ ಪರಿಣಾಮದಿಂದ ರಾಜ್ಯದಲ್ಲಿ ಮೋಡದ ವಾತಾವರಣ ಸೃಷ್ಟಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ
ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ
January 7, 2026
10:04 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror