ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

July 2, 2024
12:21 PM

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

Advertisement

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ
ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
April 6, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group