Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

Advertisement
Advertisement

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…

4 hours ago

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ

ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ  ಗ್ರಾಮ ಪಂಚಾಯತಿಯನ್ನು  ದತ್ತು ಸ್ವೀಕಾರ ಮಾಡಬೇಕೆಂದು…

5 hours ago

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…

5 hours ago

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ…

5 hours ago

ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ

ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ…

5 hours ago

ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾಣಂ, ರಾಯಲಸೀಮಾ, ತೆಲಂಗಾಣ, ಕರ್ನಾಟಕ,…

5 hours ago