Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

Advertisement

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

4 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

5 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

5 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

5 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

5 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

6 hours ago