Advertisement
Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

25 minutes ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

42 minutes ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

47 minutes ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

58 minutes ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago