Advertisement
Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

4 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

5 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

14 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

18 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

18 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago