Advertisement
Opinion

ಮಣ್ಣು ಅಂದರೆ ಮಣ್ಣು ಅಷ್ಟೊಂದು ಮಹತ್ವ ಏಕೆ? ಎಂಬ ಪ್ರಶ್ನೆ..?

Share

ಜಗತ್ತಿನ ಎಲ್ಲ ಜೀವಿಗಳ(creature)ಆಸ್ತಿತ್ವಕ್ಕೆ ಕಾರಣವೇ ಮಣ್ಣು(Soil).  ಆದರೆ ಅತ್ಯಂತ ಹೆಚ್ಚು ಪೆಟ್ಟು ತಿನ್ನುವ ವಸ್ತು ಜಗತ್ತಿನಲ್ಲಿ “ಮಣ್ಣು” ಮಾತ್ರ. ಅಗೆಯುತ್ತೇವೆ, ಕೊಚ್ಚುತ್ತೇವೆ, ಗೀರುತ್ತೇವೆ , ತೋಡುತ್ತೇವೆ, ತಳ್ಳುತ್ತೇವೆ, ಸುಡುತ್ತೇವೆ, ಗಣಿಗಾರಿಕೆ ಮಾಡುತ್ತೇವೆ. ಅದರ ಮೇಲೆ ಕಸ(Waste) ಸುರಿಯುತ್ತೇವೆ. ಬಿಸಿ(Heat) ಸುರಿಯುತ್ತೇವೆ, ವಿಕಿರಣ ಸುರಿಯುತ್ತೇವೆ ವಿಷ(Poisson) ತುಂಬುತ್ತೇವೆ. ಆದರೆ ಜೀವ ತುಂಬುವವರು ಬಹಳ ಕಡಿಮೆ.

ಜೀವ ತುಂಬುವುದು ಹೇಗೆ?: ಕಲ್ಲು ಮಣ್ಣಾಗಲು ಕೊಟ್ಯಾಂತರ ವರ್ಷಗಳು ಬೇಕು. ಮಣ್ಣು ಎಂದರೆ ಅದು ನಿರ್ಜೀವ ವಸ್ತು ಅಲ್ಲ. ಜೀವ ಖಜಾನೆ. ಮಣ್ಣಿದ್ದಲ್ಲಿ ಜೀವ ಸೃಷ್ಟಿ. ಮಣ್ಣಿನಲ್ಲಿರುವ ಸೂಕ್ಷ್ಮಜೀವಿಗಳು ಬದುಕಿದ್ದರೆ ಮಾತ್ರ ನಮ್ಮ ಬದುಕು .ಆರೋಗ್ಯವಂತ ಮಣ್ಣಿನಲ್ಲಿ ಮಾತ್ರ ನಮ್ಮ ಆಹಾರ, ಜೀವದ್ರವ ಶುದ್ದ ನೀರು ಲಭ್ಯ. ನಾವು ಅಭಿವೃದ್ಧಿ ಕಾರ್ಯಗಳ ನಿಮಿತ್ತ ಅರಣ್ಯ ನಾಶ, ಗಣಿಗಾರಿಕೆ, ರಾಸಾಯನಿಕ ಗೊಬ್ಬರ ಉಪಯೋಗ, ಕೆಮಿಕಲ್ ಉತ್ಪಾದನಾ ಘಟಕಗಳು, ಗೊಮಾಳಗಳ ನಾಶ, ತೈಲ ಸಂಸ್ಕರಣೆ ಘಟಕಗಳು, ಇನ್ನಿತರ ನೂರಾರು ಚಟುವಟಿಕೆಗಳಿಂದ ಮಣ್ಣಿನ ಸಾರಸತ್ವ ನಿಸ್ಸಾರವಾಗಿದ್ದು ನಮ್ಮ ಭವಿಷ್ಯ ಸಂಕಟಕ್ಕೆ ಸಿಲುಕಿದೆ.

ಜಲಚಕ್ರ, ಇಂಗಾಲಚಕ್ರ , ಸಾರಜನಕ ಚಕ್ರ , ಜೀವಚಕ್ರ ಸಂಕಟಕ್ಕೆ ಸಿಲುಕುತ್ತಿದೆ. ಹಾಗಾಗಿ ಮಣ್ಣಿನ ರಕ್ಷಣೆ ಇಂದಿನ , ಮುಂದಿನ, ಎಂದೆಂದಿನ ಆದ್ಯತೆ. ಮಣ್ಣು ಆರೋಗ್ಯವಾಗಿದ್ದರಷ್ಟೆ ಜೀವ ಜಗತ್ತು ಸಮೃದ್ಧವಾಗಿರಲು ಸಾಧ್ಯ. ಮಣ್ಣು ತೀರ ಕ್ಷುಲ್ಲಕ, ಅದರಲ್ಲೇನಿದೆ ಮಣ್ಣು, ಅವನಿಗೇನು ಗೊತ್ತು ” ಮಣ್ಣಾಂಗಟ್ಟಿ ” ಎಂಬ ಉಡಾಫೆಯಿಂದ ಸಂರಕ್ಷಣೆ ಮಾಡದಿದ್ದರೆ ಜೀವಸಂಕುಲ ಮಣ್ಣಿನಲ್ಲಿ ಲೀನವಾಗುವುದು ಅಷ್ಟೇ ಸತ್ಯ

ನಾಗೇಶ್ ಹೆಗಡೆಯವರ ” ಮಣ್ಣೆಂಬ ಪುಣ್ಯ ಕಾಲ್ಕೆಳಗೆ” ಲೇಖನ ಆಧರಿಸಿದ ಸಂಕ್ಷಿಪ್ತ ರೂಪ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

3 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

13 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

13 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

18 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

18 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

22 hours ago