ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಮಾತನಾಡಿದ ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.
ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.
ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು…
ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…
ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…
Jaanavi.R , 4th Standard, Udaya English school, Rajeshwari Nagara, Bangalore…
ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ಬಿಡಾಡಿಯಾಗಿ ರಸ್ತೆಗಳಲ್ಲಿ ಬಿಡುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ…
ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ…