ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದೆ.
ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಇಂಧನ ಭದ್ರತಾ ಯೋಜನೆ- ಪಿಎಂ ಕುಸುಮ್ ರೈತರಿಗೆ ವರವಾಗಿದೆ. ಈ ಯೋಜನೆ ಹೆಚ್ಚಿನ ರೈತರಿಗೆ ತಲುಪಿಸಲು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಾಗಾರ ಆಯೋಜಿಸುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಮಾತನಾಡಿದ ತರಬೇತುದಾರ ವೀರಭದ್ರ ರೆಡ್ಡಿ ಪ್ರಧಾನ ಮಂತ್ರಿ ಕುಸುಮ್ ಯೋಜನೆ ರೈತರಿಗೆ ಅನುಕೂಲಕವಾಗಿದ್ದು, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ರೈತರಿಗೆ ಅಗತ್ಯವಿದೆ. ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ , ಪವನ ವಿದ್ಯುತ್ ಬಳಕೆಗೆ ಸರ್ಕಾರ ಆದ್ಯತೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ನಾವು ಸಾಂಪ್ರದಾಯಿಕ ಇಂಧನಗಳ ಮೇಲಿನ ಅವಲಂಬನೆಯನ್ನು ತಗ್ಗಿಸಬೇಕಾಗಿದೆ ಎಂದು ತಿಳಿಸಿದರು.
ರೈತ ಭಾಸ್ಕರ್ ಶೆಟ್ಟಿ, ಪರಿಸರ ಪೂರಕ ಇಂಧನ ಬಳಕೆ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸಿದ್ದು, ಸೌರಶಕ್ತಿ, ಪವನ ವಿದ್ಯುತ್ ಬಳಕೆಯಿಂದ ಪರಿಸರ ಹಾನಿಯನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…