Advertisement
MIRROR FOCUS

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

Share

ಕರಿಮೆಣಸು(Pepper) – ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್  ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ಲಾಂಟರ್ಸ್ ಕ್ಲಬ್ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು  ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ  ಮನವಿ ಮಾಡಿದ್ದಾರೆ.

Advertisement
Advertisement

ಈ ಬಗ್ಗೆ  ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ. ವ್ಯಾಪ್ತಿಗೆ ಬರುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ದು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ. ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

18 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

18 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

18 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

18 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago