Advertisement
MIRROR FOCUS

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

Share

ಕರಿಮೆಣಸು(Pepper) – ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್  ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ಲಾಂಟರ್ಸ್ ಕ್ಲಬ್ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು  ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ  ಮನವಿ ಮಾಡಿದ್ದಾರೆ.

ಈ ಬಗ್ಗೆ  ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ. ವ್ಯಾಪ್ತಿಗೆ ಬರುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ದು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ. ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

14 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

20 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago