Advertisement
MIRROR FOCUS

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

Share

ಕರಿಮೆಣಸು(Pepper) – ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್  ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ಲಾಂಟರ್ಸ್ ಕ್ಲಬ್ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು  ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ  ಮನವಿ ಮಾಡಿದ್ದಾರೆ.

ಈ ಬಗ್ಗೆ  ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ. ವ್ಯಾಪ್ತಿಗೆ ಬರುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ದು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ. ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

10 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

19 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

24 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago