Advertisement
MIRROR FOCUS

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಯಾಕೆ..?: ರೈತರಿಂದ ತೀವ್ರ ವಿರೋಧ

Share

ಕರಿಮೆಣಸು(Pepper) – ಏಲಕ್ಕಿಯನ್ನು(Cardamom) ಜಿ.ಎಸ್.ಟಿ(GST) ವ್ಯಾಪ್ತಿಗೆ ತರುವ ಬಗ್ಗೆ  ಕೊಡಗು(Kodagu)ಜಿಲ್ಲೆಯಲ್ಲಿ ಜಿ.ಎಸ್.ಟಿ. ಇಲಾಖಾ ಅಧಿಕಾರಿಗಳು ರೈತರು ಹಾಗೂ ಬೆಳೆಗಾರರನ್ನು ಒತ್ತಾಯಪಡಿಸುತ್ತಿದ್ದು, ಈ ವಿಚಾರಕ್ಕೆ ಕೊಡಗು ಪ್ಲಾಂಟರ್ಸ್ ಕ್ಲಬ್  ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ಲಾಂಟರ್ಸ್ ಕ್ಲಬ್ ಪದಾಧಿಕಾರಿಗಳ ನಿಯೋಗ ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು  ಭೇಟಿ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಇದನ್ನು ತಡೆಯುವಂತೆ ಮಾಡಲು ಕೋರಿ ಮನವಿ ಸಲ್ಲಿಸಿದ್ದಾರೆ.ಸಿಪಿಎ ಅಧ್ಯಕ್ಷ ನಂದಾ ಬೆಳ್ಯಪ್ಪ, ಉಪಾಧ್ಯಕ್ಷ ಎ.ಎ. ಚಂಗಪ್ಪ, ಸದಸ್ಯರುಗಳಾದ ಕೆ.ಕೆ. ವಿಶ್ವನಾಥ್, ಕೆ.ಕೆ. ಬೆಳ್ಯಪ್ಪ ಕಾರ್ಯಪ್ಪ, ಕಾರ್ಯದರ್ಶಿ ಸಿ.ಕೆ. ಬೆಳ್ಳಿಯಪ್ಪ ಅವರುಗಳು ಸಂಸದರಿಗೆ  ಮನವಿ ಮಾಡಿದ್ದಾರೆ.

ಈ ಬಗ್ಗೆ  ಮಾಹಿತಿ ನೀಡಿರುವ ನಂದಾ ಬೆಳ್ಯಪ್ಪ ಅವರು ಜಿ.ಎಸ್.ಟಿ ಅಧಿಕಾರಿಗಳು ಜಿಲ್ಲೆಯ ರೈತರು ಮತ್ತು ಬೆಳೆಗಾರರಿಗೆ ಕರಿಮೆಣಸು ಜಿ.ಎಸ್.ಟಿ ವ್ಯಾಪ್ತಿಯಲ್ಲಿ ಬರುತ್ತದೆ. ಆದುದರಿಂದ ತಮ್ಮನ್ನು ಜಿ.ಎಸ್.ಟಿ ಅಡಿಯಲ್ಲಿ, ನೊಂದಾಯಿಸಿಕೊಳ್ಳುವಂತೆ ಒತ್ತಾಯಿಸಿ ನೋಟಿಸುಗಳನ್ನು ನೀಡುತ್ತಿದ್ದಾರೆ. ಹಸಿರು ಕಾಳು ಮೆಣಸು ಜಿ.ಎಸ್.ಟಿ, ವ್ಯಾಪ್ತಿಗೆ ಬರುವುದಿಲ್ಲ, ಆದರೆ ಅದನ್ನು ಒಣಗಿಸಿ ಕರಿಮೆಣಸಿಗೆ ಪರಿವರ್ತಿಸಿದರೆ ಅದು ಜಿ.ಎಸ್.ಟಿ. ವ್ಯಾಪ್ತಿಗೆ ಬರುತ್ತದೆ ಎಂಬುದು ಅವರ ವಾದವಾಗಿದೆ.

ವಾಸ್ತವವಾಗಿ ಕೃಷಿಕರು ಪಾಲಿಸುವ ಒಣಗಿಸುವ ಪ್ರಕ್ರಿಯೆಯು ಉತ್ಪನ್ನದ ಅಗತ್ಯ ಗುಣಲಕ್ಷಣಗಳನ್ನು ಬದಲಾಯಿಸುವುದಿಲ್ಲ ಮತ್ತು ಈ ಪ್ರಕ್ರಿಯೆಯು ಕರಿಮೆಣಸು ಮತ್ತು ಏಲಕ್ಕಿಯ ತೆರಿಗೆ ವಿನಾಯಿತಿ ಸ್ಥಿತಿಯ ಮೇಲೆ ಪರಿಣಾಮ ಬೀರಬಾರದು. ಈ ವಿಧಾನವು ಜಿ.ಎಸ್.ಟಿ. ಕಾಯಿದೆಯಿಂದ ಬೆಂಬಲಿತವಾಗಿದೆ, ಸಿ.ಜಿ.ಎಸ್.ಟಿ. ಕಾಯಿದೆ ೨೦೧೭ರ ಸೆಕ್ಷನ್ ೨(೭)ರ ಅಡಿಯಲ್ಲಿನ ವ್ಯಾಖ್ಯಾನವು ವ್ಯಕ್ತಿಗಳು ಅಥವಾ ಹಿಂದೂ ಅವಿಭಜಿತ ಕುಟುಂಬಗಳು ತಮ್ಮ ದುಡಿಮೆಯಿಂದ ಅಥವಾ ಕುಟುಂಬದ ಸದಸ್ಯರು ಅಥವಾ ಕೂಲಿ ಕಾರ್ಮಿಕರ ಸಹಾಯದಿಂದ ಭೂಮಿಯ ಸಾಗುವಳಿಯಲ್ಲಿ ತೊಡಗಿರುವವರಿಗೆ ಜಿ.ಎಸ್.ಟಿ.ಯಿಂದ ಸ್ಪಷ್ಟವಾಗಿ ವಿನಾಯಿತಿ ನೀಡುತ್ತದೆ.

ಭತ್ತ ಮತ್ತು ಕೆಂಪು ಮೆಣಸಿನಕಾಯಿಯಂತಹ ಬೆಳೆಗಳಿಗೆ ಜಿ.ಎಸ್.ಟಿ.ಯಿಂದ ವಿನಾಯಿತಿ ನೀಡಿ ಕರಿಮೆಣಸು ಮತ್ತು ಏಲಕ್ಕಿ ಬೆಳೆಗಳನ್ನು ಜಿ.ಎಸ್.ಟಿ, ಅಡಿಯಲ್ಲಿ ತಂದಿರುವುದು ಅಸಮಂಜಸವಾಗಿದೆ, ಏಕೆಂದರೆ ಈ ಎಲ್ಲಾ ಬೆಳೆಗಳೂ ಕುಯ್ದು ಮಾಡಿ ಒಣಗಿಸಿದ ನಂತರವೇ ಉಪಯೋಗಿಸಲು ಅಥವಾ ಮಾರುಕಟ್ಟೆ ಪ್ರವೇಶಿಸಲು ಯೋಗ್ಯವಾಗಿರುತ್ತವೆ ಎಂದಿದ್ದಾರೆ. ಕೇಂದ್ರ ಹಣಕಾಸು ಸಚಿವರು ಮತ್ತು ಹಣಕಾಸು ಕಾರ್ಯಾಲಯದ ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಪತ್ರವನ್ನು ಸಂಸದರ ಮೂಲಕ ಸಲ್ಲಿಸಲಾಯಿತು. ಸಂಸದರು ಕೇಂದ್ರ ಹಣಕಾಸು ಸಚಿವಾಲಯದೊಂದಿಗೆ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಭರವಸೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

6 minutes ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

10 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

16 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

1 day ago