Advertisement
ಅಂಕಣ

ಬೆಳ್ತಂಗಡಿಯಲ್ಲಿಯೇ ಯಾಕೆ ಹಾಗಾಗ್ತಿದೆ…? |

Share

ಬೆಳ್ತಂಗಡಿಯಲ್ಲಿಯೇ ಯಾಕೆ ಹಾಗಾಗ್ತಿದೆ..?. ಬಿಜೆಪಿಯೂ ಏಕೆ ಕಾಂಗ್ರೆಸ್‌ ಹಾದಿ ಹಿಡಿಯುತ್ತಿದೆ..? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಈಚೆಗೆ ನೀಡಿದ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ತಾಳೆ ಹಾಕಲು ಆಗ್ತದಾ..?. ಬಹಳ ಗಂಭೀರವಾಗಿ ಯೋಚಿಸಬೇಕಾದ ವಿಷಯ ಇದು. ದ್ವೇಷ ರಾಜಕಾರಣವು ಇಡೀ ಸಮಾಜವೇ ಗೌರವಿಸುವ ಅಧಿಕಾರಗಳ ಮೇಲೂ ತಿರುಗುತ್ತಿದೆ ಎನ್ನುವುದು ಅಪಾಯಕಾರಿ ಬೆಳವಣಿಗೆ. ಹೀಗೇ ಮುಂದುವರಿದರೆ ಶಾಂತಿ ಹಾಗೂ ಸುವ್ಯವಸ್ಥೆ ಹೇಗೆ ? ಅಧಿಕಾರಿಗಳ ಮಾತುಗಳನ್ನು, ನಿಯಮಗಳನ್ನು ಕೇಳುವವರು ಯಾರು..? ಹೀಗೇ ನಡೆಯುವ ರಾಜಕೀಯ ವ್ಯವಸ್ಥೆ ಅಪಾಯದಲ್ಲಿದೆ ಎಂದೇ ಅರ್ಥ.

Advertisement
Advertisement

ಕಳೆದ ಹತ್ತು ವರ್ಷಗಳ ಬೆಳ್ತಂಗಡಿ ಬೆಳವಣಿಗೆ. ಆರಂಭದ ಐದು ವರ್ಷ ಅಭಿವೃದ್ಧಿ ಪರ್ವ ಬೆಳ್ತಂಗಡಿಯಲ್ಲಿ. ಊರು ಊರಿಗೂ ಕಾಂಕ್ರೀಟು ರಸ್ತೆಯಾಗಿದೆ ಎನ್ನುವುದೇ ಜನರಿಗೆ ಖುಷಿ. ಇದೇ ಆ ಕ್ಷೇತ್ರಕ್ಕೆ ಹಾಗೂ ಶಾಸಕ ಹರೀಶ ಪೂಂಜಾ ಅವರಿಗೆ ಗರಿಯಾಗಿತ್ತು. ಅದಾಗಿ ಈಚೆಗೆ 2-3 ವರ್ಷಗಳಿಂದ ಗಮನಿಸಿ ನೋಡಿ ಕೆಲವು ಅನಪೇಕ್ಷಿತ ಘಟನೆಗಳು. ನೆಲ್ಯಾಡಿಯ ಮರದ ಪ್ರಕರಣ ಹಾಗೂ ಆ ಬಳಿಕ ನಡೆದ ಘಟನೆಗಳು, ಕೆಲವು ಸಮಯದ ಹಿಂದೆ ಅರಣ್ಯ ಅಧಿಕಾರಿಗಳ ವರ್ತನೆ ಹಾಗೂ ಆ ಘಟನೆಗಳು, ಬೆಳ್ತಂಗಡಿಯ ಶಾಸಕರ ಕಾರನ್ನು ಫಾಲೋ ಮಾಡಿ ತಲವಾರು ಝಲಪಿಸಿದ ಘಟನೆ, ಸ್ಥಳೀಯ ಪತ್ರಿಕೆ ಸಂಪಾದಕರ ವಿರುದ್ಧ ಬಹಿರಂಗವಾಗಿ ಮಾತನಾಡಿದ ಘಟನೆ, ಈಗ ಪೊಲೀಸ್‌ ಅಧಿಕಾರಿಗಳೊಂದಿಗೆ ವರ್ತಿಸಿದ ರೀತಿ, ಇದೆಲ್ಲಾ ಬೆಳ್ತಂಗಡಿಯಲ್ಲಿ ನಡೆಯಿತು. ಯಾಕೆ ಹೀಗಾಯಿತು ಬೆಳ್ತಂಗಡಿಯಲ್ಲಿ ಮಾತ್ರಾ ? ಅಲ್ಲಿನ ಶಾಸಕರು ಹಿಂದಿನ  ಐದು ವರ್ಷ ನಡೆಸಿದ ಅಭಿವೃದ್ಧಿ  ಕಾರ್ಯಗಳೇ ಮುಳುವಾಯಿತಾ ? ಅಧಿಕಾರಿಗಳು ಅತ್ಯಂತ ಕೆಟ್ಟದಾಗಿ ವರ್ತನೆ ಮಾಡುತ್ತಿದ್ದಾರಾ ? ಇದೆಲ್ಲಾ ಈಗ ತುರ್ತಾಗಿ ಗಮನಿಸಬೇಕಾದ ವಿಷಯ.

Advertisement

ಏಕೆಂದರೆ, ಅಧಿಕಾರಿಗಳು ಅವರ ಇಡೀ ಜೀವನ ಪೂರ್ತಿ ಸಮಾಜಕ್ಕಾಗಿ ಕೆಲಸ ಮಾಡುತ್ತಾರೆ. ಸರ್ಕಾರದಿಂದ ವೇತನ ಪಡೆಯುತ್ತಾರೆ ನಿಜವಾದರೂ, ಸಮಾಜದ ಸ್ವಾಸ್ಥ್ಯ ಕಾಪಾಡಲೂ ಅವರೇ ಕಾರಣರಾಗುತ್ತಾರೆ. ಸರ್ಕಾರಗಳ ಒತ್ತಡ ಇದ್ದರೂ ಸಂಯಮದಿಂದ ಅವರೂ ವರ್ತಿಸಬೇಕಾಗುತ್ತದೆ. ಅದಕ್ಕಿಂತಲೂ ಹೆಚ್ಚಿನ ಜವಾಬ್ದಾರಿ ಸಂಸ್ಕಾರ ಪಡೆದ ಶಾಸಕರಿಗೂ ಇರುತ್ತದೆ. ಒಬ್ಬ ಶಾಸಕ ಇಡೀ ಕ್ಷೇತ್ರಕ್ಕೆ ಮಾಡೆಲ್‌ ಆಗಿರುತ್ತಾರೆ. ಶಾಸಕ ಮಾಡಿದ ರೀತಿಯಲ್ಲೇ ಕಾರ್ಯಕರ್ತರ ನಾಯಕ ಮಾಡುತ್ತಾನೆ. ಹೀಗೇ ಮುಂದುವರಿದರೆ ಶಾಂತಿ-ಸುವ್ಯವಸ್ಥೆ ಕಾಪಾಡುವುದು ಹೇಗೆ?  ಅಧಿಕಾರಿಗಳಿಗೆ ನಿಯಂತ್ರಣ ಹೇಗೆ?. ಯಾವುದೇ ಪಕ್ಷದ ಕಾರ್ಯಕರ್ತರು ತಪ್ಪು ಮಾಡಿದ್ದರೆ, ತಪ್ಪಿನ ಪರವಾಗಿ ನಿಲ್ಲುವ ಬದಲಾಗಿ ಮುಂದೆ ಅಂತಹ ತಪ್ಪುಗಳು ಆಗದಂತೆ ಮಾಡಿಸಬೇಕಾದ ಕೆಲಸ ಶಾಸಕ, ಜನಪ್ರತಿನಿಧಿ ಮೇಲೂ ಇರುತ್ತದೆ, ಇದನ್ನು ಬಿಜೆಪಿಯ ಪ್ರಾಥಮಿಕ ಪಾಠದಲ್ಲೇ ಹೇಳಲಾಗುತ್ತದೆ. ಇಂತ ಘಟನೆಗಳನ್ನೆಲ್ಲಾ ಬಿಜೆಪಿಯ ಮಾತೃ ಸಂಘಟನೆಯಾದ “ಸಂಘ”ವು  ಹೇಗೆ ಸಹಿಸಿಕೊಳ್ಳುತ್ತಿದೆ..?. ಟಿಕೆಟ್‌ ಹಂಚಿಕೆಯ ವೇಳೆ ಸಂಘವೇ ಪ್ರಮುಖ ಪಾತ್ರವಹಿಸುವಾಗ, ಅಧಿಕಾರಿಗಳ ಮೇಲೆಯೂ ತೀರಾ ಅವಾಚ್ಯವಾಗಿ ಒಬ್ಬ ಶಾಸಕ ನಿಂದಿಸುವಾಗಲೂ ಏಕೆ ಕರೆದು ಹೇಳುತ್ತಿಲ್ಲ..? ಬಹಳ ಅಚ್ಚರಿಯಾಗುವುದೇ ಇಲ್ಲಿ..

ಕಾಂಗ್ರೆಸ್‌ ಮಾಡುತ್ತದೆ ಎಂದು ಬಿಜೆಪಿಯೂ ಅದೇ ಹಾದಿ ಹಿಡಿದರೆ ಹೇಗೆ? ಸಮರ್ಥವಾಗಿ ಎದುರಿಸುವುದು ಸಭ್ಯ ದಾರಿಯಲ್ಲೂ ಸಾಧ್ಯವಿದೆ. ಅದನ್ನು ಮಾಡಬೇಕಾದ ಕೆಲಸ ಆಗಬೇಕೇ ಹೊರತು ಅಧಿಕಾರಿಗಳಿಗೆ ಸೊಂಟದ ಕೆಳಗಿನ ಭಾಷೆಯನ್ನು ಸಂಸ್ಕಾರದ ಹಿನ್ನೆಲೆಯ ಪಕ್ಷ ಮಾಡುವುದು ಶೋಭೆ ಅಲ್ಲವೇ ಅಲ್ಲ. ಏಕೆಂದರೆ ಬಿಜೆಪಿ ಪಕ್ಷ ಬೆಳೆದಿರುವುದು ಸಂಸ್ಕಾರದ ಕಾರಣದಿಂದಲೇ ಹೊರತು ಸೊಂಟದ ಕೆಳಗಿನ ಭಾಷೆಯ ಕಾರಣದಿಂದ ಅಲ್ಲ. ಅನೇಕ ವರ್ಷಗಳಿಂದ ಮನೆ ಮನೆಗೆ ಹೋಗಿ ಚಪ್ಪಲಿ ಸವೆಸಿರುವ ಬಿಜೆಪಿಯ ನಿಜವಾದ ಕಾರ್ಯಕರ್ತರು ತಮ್ಮನ್ನು ರಕ್ಷಣೆಗೆ ಬಯಸುವುದು ಸರಿಯಾದ ವಿಷಯವೇ ಹೌದು. ಆದರೆ  ಈ ಹಿಂದೆ ಪಕ್ಷವನ್ನು ಬೆಳೆಸಿರುವ ಸಾಕಷ್ಟು ಮಂದಿ  ಅದಕ್ಕೂ ಒಂದು ಚೌಕಟ್ಟನ್ನು ಹಾಕಿಕೊಟ್ಟಿದ್ದಾರೆ. ಈಚೆಗೆ ದಕ ಜಿಲ್ಲೆಯಲ್ಲಿ ಆ ಚೌಕಟ್ಟು ಕುಸಿಯುತ್ತಿರುವುದು ಕಂಡುಬರುತ್ತಿದೆ. ಆದರೂ ಯಾರೊಬ್ಬರೂ ಮಾತನಾಡದೇ ಇರುವುದರ ಪರಿಣಾಮ ಇಂತಹ ಘಟನೆಗಳೂ ಹೆಚ್ಚಾಗುವುದು ಇನ್ನೂ ಇದೆ. ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದೊಂದು ಸಹಜ ಘಟನೆಯಾಗುವ ಸಾಧ್ಯತೆಯೇ ಹೆಚ್ಚು.

Advertisement

ಒಂದು ಕಲ್ಲುಕೋರೆಯ ಪ್ರಕರಣದ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರೂ ಸೊಂಟದ ಕೆಳಗಿನ ಭಾಷೆಯ ಪರ, ಒಂದು ಪೊಲೀಸ್‌ ಕೇಸಿನ ಪ್ರಕರಣದ ತನಿಖೆಯೂ ಹಿನ್ನಡೆಯಾಗುವುದಕ್ಕೆ ಕಾರಣವಾಯಿತು. ಇದಕ್ಕೆ ಈಗಿನ ಸರ್ಕಾರವೂ ಕಾರಣವಾಯಿತು. ಸರ್ಕಾರವೂ ಒಬ್ಬ ಶಾಸಕನನ್ನು ಬಂಧಿಸುವುದಕ್ಕೆ ಮೊದಲು ಆದ್ಯತೆ ನೀಡುವ ಬದಲಾಗಿ ಪ್ರಕರಣದ ಮೂಲ ತನಿಖೆಯನ್ನು ಮಾಡಿಸಬೇಕಿತ್ತು. ಸ್ಥಳೀಯ ವಿರೋಧ ಪಕ್ಷದ ನಾಯಕರೂ ಮೂಲ ಪ್ರಕರಣದ ತನಿಖೆಗೇ ಆದ್ಯತೆ ನೀಡುವಂತೆ ಒತ್ತಾಯ ಮಾಡಬೇಕಿತ್ತು. ಅದರ ಹೊರತಾಗಿ ಇಡೀ ಪ್ರಕರಣ ಹಳಿ ತಪ್ಪುವ ಹಾಗೆ ಮಾಡುವಲ್ಲಿ ಎಲ್ಲರ ಪಾತ್ರವೂ ಮಹತ್ವವಾಯಿತು.

ಅಂದ ಹಾಗೆ, ನಾಳೆ ಸಮಾಜದ ಯಾವುದೋ ಒಬ್ಬ ವ್ಯಕ್ತಿಯ ಮೇಲೆ ದ ಕ ಜಿಲ್ಲೆಯ ನಿಜವಾಗಿಯೂ ಸುಳ್ಳು ಕೇಸುಗಳು ದಾಖಲಾಗುವಾಗ, ಅಕ್ರಮ ಚಟುವಟಿಕೆಗಳು ನಡೆಯುವಾಗ ತಡೆಯುವಾಗ ಕೇಸುಗಳಾದರೆ ತಡೆಯುವವರು ಯಾರು, ಇದೇ ಮಾದರಿಯಲ್ಲಿ ಪ್ರತಿಭಟನೆ, ಹೋರಾಟ ಮಾಡುವವರು ಯಾರು..? ಮಾದರಿ ಆಗಬೇಕಾದ ಕಾರ್ಯಗಳು ಈಗ ನಡೆಯಬೇಕು, ನಡೆಸಬೇಕು. ಅಧಿಕಾರ ಶಾಶ್ವತವಲ್ಲ, ಮಾದರಿ ಕಾರ್ಯಗಳು ಶಾಶ್ವತ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಘುರಾಮ್ ಯು ಎಸ್

ರಘುರಾಮ್‌ ಯು ಎಸ್‌ ಅವರು ಸುಮಾರು 5 ವರ್ಷಗಳ ಕಾಲ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಬಳಿಕ ಸುಮಾರು 20 ವರ್ಷಗಳ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇದೀಗ ನಿವೃತ್ತ ಜೀವನ ನಡೆಸುತ್ತಿರುವ ಅವರು ರಾಜಕೀಯ ಕ್ಷೇತ್ರದ ಒಳನೋಟಗಳ ಬಗ್ಗೆ ಇಲ್ಲಿ ಬರೆಯುತ್ತಾರೆ.

Published by
ರಘುರಾಮ್ ಯು ಎಸ್

Recent Posts

ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ | ವಿಶೇಷ ಅನುಬಂಧ ಕಾರ್ಯಕ್ರಮ

ಒಳ್ಳೆ ವಿಚಾರಗಳನ್ನು ನಮ್ಮ ಸಂಸ್ಕೃತಿಗೆ ಅಳವಡಿಸಿಕೊಳ್ಳುವುದು ಹಿರಿಯರಿಂದ ನಡೆದು ಬಂದ ಸಂಪ್ರದಾಯವಾಗಿದೆ. ಈ…

5 hours ago

ಗ್ರಾಮೀಣ ಶಾಲೆಗಳಿಗೆ “ಸೇವೆ” | ವೈದ್ಯರ ತಂಡದ “ಸಂಕಲ್ಪ” | ಬಾಳಿಲ ಶಾಲೆಗೆ ಕಲಿಕಾ ಸಾಮಾಗ್ರಿಗಳ ಹಸ್ತಾಂತರ |

ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳಿಗೆ ಈ ಮಾದರಿಯ ಕೊಡುಗೆಗಳು ಲಭ್ಯವಾದರೆ ಉತ್ತಮ ಶಿಕ್ಷಣವನ್ನು…

7 hours ago

Karnakata Weather | 23-06-2024 | ಕೆಲವು ಜಿಲ್ಲೆಗಳಿಗೆ ರೆಡ್‌ ಎಲರ್ಟ್…|‌ ಜೂ.28ರ ತನಕ ಮಳೆ ಮುಂದುವರಿಯುವ ಲಕ್ಷಣ |

ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು…

13 hours ago

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ…

1 day ago

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು…

1 day ago

ಹವಾಮಾನ ವೈಪರೀತ್ಯ | ಹಜ್​ ಯಾತ್ರೆ ವೇಳೆ ಬಿಸಿಲಿನ ತಾಪದಿಂದ 98 ಭಾರತೀಯರ ಸಾವು | ಯಾತ್ರಿಕರ ಸುರಕ್ಷತೆಗಾಗಿ 365 ವೈದ್ಯರ ನಿಯೋಜನೆ

ಹವಾಮಾನ ವೈಪರಿತ್ಯ(Climate Change) ಇಡೀ ವಿಶ್ವವನ್ನೇ(World) ಹೈರಾಣಾಗಿಸಿದೆ. ವಿಶ್ವದಾದ್ಯಂತ ಪ್ರಕೃತಿಯ ವಿಕೋಪಕ್ಕೆ(Natural calamities)…

1 day ago