MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

Advertisement

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

1 hour ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

2 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

2 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

2 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

10 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

10 hours ago