MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

Advertisement

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ

ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ…

5 hours ago

ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…

8 hours ago

ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!

ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್‌…

8 hours ago

ರಕ್ಷಣೆಗೂ ಭಕ್ಷಣೆಗೂ ಒಂದೇ ಕಾನೂನು

ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…

9 hours ago

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |

ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…

18 hours ago

ಹೊಸರುಚಿ | ಗುಜ್ಜೆ ಬೋಂಡಾ

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4…

21 hours ago