Advertisement
MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ

ಸೂಪರ್ ಟೈಫೂನ್ ಬಾವಿ ದುರ್ಬಲವಾಗಿದ್ದರೂ ಪೂರ್ವ ಚೀನಾದಲ್ಲಿ ಭಾರೀ ಮಳೆ, ಪ್ರವಾಹ ಹಾಗೂ…

6 hours ago

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…

14 hours ago

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

17 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

17 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

21 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

2 days ago