Advertisement
MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

11 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago