Advertisement
MIRROR FOCUS

ರೈತರು ತಮ್ಮ ಹೊಲದ ನಕ್ಷೆ ಏಕೆ ಇಟ್ಟುಕೊಳ್ಳಬೇಕು..? | ಹೊಲದ ನಕ್ಷೆಯನ್ನು ಬರೆಯುವುದಾದರೂ ಹೇಗೆ?

Share

ನಮ್ಮಲ್ಲಿನ ಅನೇಕ ರೈತರು ತಮ್ಮಲ್ಲಿರುವ ಹೊಲಗಳ ಸ್ಥಿತಿಗತಿಯನ್ನು ಸುಧಾರಿಸುವತ್ತ ಗಮನ ಹರಿಸುತ್ತಿದ್ದಾರೆ. ಹಾಗೆಯೇ ತಮ್ಮ ಹೊಲದ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವತ್ತಲೂ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸಾಧಿಸುವತ್ತ ಯೋಜನೆಯೊಂದನ್ನು ರೂಪಿಸಿಕೊಳ್ಳಬೇಕು. ಈ ಯೋಜನೆಗೆ ಸಹಕಾರಿಯಾಗುವಂತೆ ನಮ್ಮ ಹೊಲದ ನಕ್ಷೆಯೊಂದನ್ನು ತಯಾರಿಸಲೇಬೇಕು.

ನಮ್ಮ ಹೊಲದ ನಕ್ಷೆಯಲ್ಲಿ ಇದಿಷ್ಟು ಇರಬೇಕು: 

  • ಹೊಲದ ದಿಕ್ಕುಗಳನ್ನು ತಿಳಿಸಬಹುದು. ಅದರ ಉದ್ದಗಲಗಳನ್ನು ಸ್ಪಷ್ಟವಾಗಿ ದಾಖಲಿಸಬಹುದು
  • ಹೊಲದ ಮೇಲ್ಮಣ್ಣು ಸವೆಯುತ್ತಿರುವ ಸ್ಥಳವನ್ನು ಹಾಗೂ ಹೊಲದಲ್ಲಿ ಬೀಳುವ ಮಳೆನೀರು ಹೊಲದಿಂದಾಚೆಗೆ ಹರಿದು ಹೋಗುವ ಪಥವನ್ನು ಗುರುತಿಸಬಹುದು.
  • ಅಳವಡಿಸಿಕೊಂಡಿರುವ ಕೃಷಿಪದ್ದತಿಯಿಂದ ಹೊಲದಲ್ಲಿರುವ ಮಣ್ಣು ಮತ್ತು ನೀರು ಮಾಲಿನ್ಯಗೊಳ್ಳುತ್ತಿರುವುದನ್ನು ಗಮನಿಸಬಹುದು
  • ಹೊಲದಲ್ಲಿನ ಪ್ರತಿಯೊಂದು ಕೋನಗಳಲ್ಲಾಗುತ್ತಿರುವ ಘಟನೆಗಳನ್ನು ಅರ್ಥಮಾಡಿಕೊಳ್ಳಬಹುದು
  • ಹೊಲವನ್ನು ಸುಧಾರಿಸುವತ್ತ ಮಾಡಬಹುದಾದ ಕ್ರಮಗಳನ್ನು ಕುರಿತು ಯೋಜನೆ ರೂಪಿಸಬಹುದು
  • ಹೊಲದಲ್ಲಿನ ಮಣ್ಣಿನ ವಿಧಗಳು ಹಾಗೂ ಅವುಗಳ ಗುಣಲಕ್ಷಣಗಳನ್ನು ಅರ್ಥಮಾಡಿಕೊಳ್ಳಬಹುದು.
  • ಹೊಲದಲ್ಲಿನ ಇಳಿಜಾರು ಪ್ರದೇಶವನ್ನು ಗುರುತಿಸಿ, ಆ ಇಳಿಜಾರಿನ ಕಾರಣ ಹೊಲದಿಂದ ಸವೆಯುತ್ತಿರುವ ಮೇಲ್ಮಣ್ಣು ಮತ್ತು ಹರಿದು ಹೊಲದಿಂದಾಚೆಗೆ ಪೋಲಾಗುತ್ತಿರುವ ಮಳೆನೀರು
  • ಇವುಗಳನ್ನು ಸಂರಕ್ಷಿಸುವತ್ತ ನಿರ್ವಹಣಾ ತಂತ್ರೋಪಾಯಗಳನ್ನು ರೂಪಿಸಬಹುದು
  • ಪ್ರತಿಯೊಂದು ಬೇಸಾಯ ಹಂಗಾಮಿನಲ್ಲಿ ಬೆಳೆಗಳ ಬದಲಾವಣೆಗಳತ್ತ ಆಲೋಚಿಸಬಹುದು
  • ಬೆಳೆಯುವ ಬೆಳೆಗಳಿಗೆ ಹಾಗೂ ಮಣ್ಣು ಜೀವಿಗಳಿಗೆ ಅಗತ್ಯವಾಗಿರುವ ಕಾಂಪೋಸ್ಟ್ ಮತ್ತಿತರ ಸಹಜ ಸಾವಯವ ಗೊಬ್ಬರಗಳನ್ನು ತಯಾರಿಸುವ ಸ್ಥಳಗಳನ್ನು ನಿರ್ಧರಿಸಬಹುದು
  • ಬೇಸಾಯದ ಅಂಗವೇ ದನದ ಅಥವಾ ಜಾನುವಾರುಗಳ ಕೊಟ್ಟಿಗೆಗಳು ಮತ್ತು ಉಪಕರಣಗಳನ್ನುಇರಿಸಲು ಅಗತ್ಯವಾಗಿರುವ ಕೋಣೆಗಳನ್ನು ನಿರ್ಮಿಸುವ ಸ್ಥಳವನ್ನು ನಿರ್ಧರಿಸಬಹುದು
  • ಹಾಗೆಯೇ, ಹೊಲದ ಬಂದೋಬಸ್ತಿಗಾಗಿ ಅಗತ್ಯ ಬೇಲಿಗಳನ್ನು ಹಾಕಿಕೊಳ್ಳಲು ಯೋಜನೆ ರೂಪಿಸಬಹುದು
  • ಮುಂದಿನ ದಿನಗಳಲ್ಲಿ ಹೊಲದ ಮೌಲ್ಯವನ್ನು ಹೆಚ್ಚಿಸುವ ಕ್ರಮಗಳ ಕುರಿತು ಯೋಜನೆಗಳನ್ನು ರೂಪಿಸಲು ನಮ್ಮ ಹೊಲದ ನಕ್ಷೆಯೊಂದನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಮಾಹಿತಿ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

14 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

20 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

20 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago