Advertisement
The Rural Mirror ವಾರದ ವಿಶೇಷ

#KhadiIndia | ಖಾದಿ ಬಟ್ಟೆ ಏಕೆ ಪ್ರೀತಿಸಬೇಕು ? | ಪರಿಸರಕ್ಕೆ ಹೇಗೆ ಪೂರಕ ? |

Share

ಇದು ಜೂನ್‌ ತಿಂಗಳು. ಪರಿಸರ ಪ್ರಿಯರಿಗೆ ಈ ತಿಂಗಳು ಅತೀ ಮಹತ್ವ. ಪ್ರತಿಯೊಬ್ಬರೂ ಪರಿಸರ ದಿನಾಚರಣೆ ಹಾಗೂ ಪರಿಸರದ ಬಗ್ಗೆಯೇ ಮಾತನಾಡುತ್ತಾರೆ. ಹೀಗಿರುವಾ ಪರಿಸರ ಸ್ನೇಹಿ ನಡೆಯನ್ನೂ ಅನುಸರಿಸಿದರೆ ಪರಿಸರ ದಿನಕ್ಕೂ ಹೆಚ್ಚು ಅರ್ಥ ಬರುತ್ತದೆ. ಇದಕ್ಕಾಗಿಯೇ ಖಾದಿ ಬಟ್ಟೆಯನ್ನೈ ಬಳಕೆ ಮಾಡಬೇಕು. ಖಾದಿ ಬಟ್ಟೆ ಪರಿಸರ ಸ್ನೇಹಿಯೂ, ಉದ್ಯೋಗ ಸೃಷ್ಟಿಯೂ, ಗ್ರಾಮೀಣ ಆರ್ಥಿಕತೆ ಹೆಚ್ಚಿಸಲೂ ಇದು ಸಹಕಾರಿಯಾಗುತ್ತದೆ. ಗ್ರಾಮೀಣ ಬದುಕುಗಳಿಗೆ ಸ್ವಾವಲಂಬನೆಯ ದಾರಿ ಸುಗಮವಾಗುತ್ತದೆ. ಖಾದಿ ಬಟ್ಟೆ ಏಕೆ ಪರಿಸರ ಸ್ನೇಹಿ ಎಂಬುದರ ಬಗ್ಗೆ ಉಡುಪಿ ಸೀರೆ ಹಾಗೂ ಕೈಮಗ್ಗ ಉಳಿವಿನ ಕಡೆಗೆ ಗಮನಹರಿಸುತ್ತಿರುವ ಕದಿಕೆ ಟ್ರಸ್ಟ್‌ ನ ಮಮತಾ ರೈ ಅವರ ಜೊತೆ ಮಾತುಕತೆ ನಡೆಸಿದ ಸಾರಾಂಶ ಇಲ್ಲಿದೆ…

ಖಾದಿ ಬಟ್ಟೆ ಈಚೆಗೆ ಹೆಚ್ಚು ಜನರ ಇಷ್ಟ ಪಡುತ್ತಾರೆ. ಇನ್ನೂ ಇದು ವ್ಯಾಪಕವಾಗಬೇಕು. ಖಾದಿ ಬಟ್ಟೆ ಬಳಕೆಯ ಕಾರಣದಿಂದ ಉದ್ಯೋಗ ಸೃಷ್ಟಿಯೂ, ಗ್ರಾಮೀಣ ಆರ್ಥಿಕತೆ ಹೆಚ್ಚಿಸಲೂ ಇದು ಸಹಕಾರಿಯಾಗುತ್ತದೆ. ಗ್ರಾಮೀಣ ಬದುಕುಗಳಿಗೆ ಸ್ವಾವಲಂಬನೆಯ ದಾರಿ ಸುಗಮವಾಗುತ್ತದೆ.

ಕೈಮಗ್ಗ ಖಾದಿ ಬಟ್ಟೆ ಪರಿಸರ ಸ್ನೇಹಿಯಾಗಿದೆ. ಯಾವುದೇ ಇಂಧನ ಅಗತ್ಯ ಇಲ್ಲ. ನೇಕಾರರ ಮಾನವ ಶ್ರಮದಿಂದಲೇ ತಯಾರಾಗುವ ಖಾದಿ ಉಡುಪುಗಳು, ಗ್ರಾಮೀಣ ಜನರಿಗೆ ಉದ್ಯೋಗಕ್ಕೂ ಕಾರಣವಾಗಿದೆ.  ಕೈಗಾರೀಕರಣದ ನಂತರ ಭೂಮಿಯ ತಾಪಮಾನ ಏರಿಕೆಯಾಗಿದೆ. ಇದರ ಪರಿಣಾಮ ಅಪಾರವಾಗಿದೆ. ಮಳೆಯ ಸಮಸ್ಯೆ ಸೇರಿದಂತೆ ವಾತಾವರಣದಲ್ಲಿ ಏರುಪೇರು ಕಂಡುಬಂದಿದೆ.  ಹೀಗಾಗಿ  ತಾಪಮಾನ ಇಳಿಕೆ ಅಗತ್ಯ ಇದೆ. ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಇಂಗಾಲ ಕಡಿಮೆ ಹೊರಸೂಸುವ ಉದ್ದಿಮೆಗಳ ಅಗತ್ಯ ಇದೆ. ಈ ನೆಲೆಯಲ್ಲಿ ಖಾದಿಯಂತಹ ಬಟ್ಟೆಗಳ ಕಡೆಗೆ ಆಸಕ್ತವಾಗುವುದಿಂದ ಮಾನವ ಶ್ರಮದ ಮೂಲಕ ನಡೆಯುವ ಕೈಮಗ್ಗದಂತಹ ಉದ್ಯಮ ಬೆಳೆಯುತ್ತದೆ.

ಖಾದಿ ಪರಿಸರ ಸಹಜ ವಸ್ತು ಬಳಸಿ ತಯಾರಾಗುತ್ತವೆ. ಮರುಬಳಕೆ ಮಾಡಿ ಭೂಮಿಗೆ ಸೇರಿದಾಗಲೂ ಉಳಿಕೆ ಇಲ್ಲದೆ ಕರಗಿ ಭೂಮಿಗೆ ಸೇರುತ್ತದೆ.  ಅದೇ ನೈಲಾನ್‌, ಪ್ಲಾಸ್ಟಿಕ್‌ ಮೂಲವಸ್ತು ಇರುವ ಬಟ್ಟೆಗಳು ಪರಿಸಕ್ಕೆ ಹಾನಿ, ಭೂಮಿಗೆ ಸೇರುವುದಿಲ್ಲ. ಅದರ ಜೊತೆಗೆ ಖಾದಿಯಂತಹ ಉದ್ಯಮಗಳು ಗ್ರಾಮೀಣ ಭಾಗದಲ್ಲೂ ಉದ್ಯೋಗ ಸೃಷ್ಟಿ ಮಾಡುತ್ತದೆ, ಸ್ಥಳೀಯವಾಗಿ ಆರ್ಥಿಕತೆಯೂ ಬೆಳೆಯುತ್ತದೆ.

ಹೀಗಾಗಿ ಪರಿಸರ ಪ್ರಿಯರಾಗಿರುವ ಎಲ್ಲರೂ ಖಾದಿ ಬಟ್ಟೆಯ ಕಡೆಗೆ ಹೆಚ್ಚು ಗಮನ ಹರಿಸಿದರೆ ಎಲ್ಲಾ ರೀತಿಯಿಂದಲೂ ಉಪಯುಕ್ತವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

18 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago