Advertisement
The Rural Mirror ವಾರದ ವಿಶೇಷ

#KhadiIndia | ಖಾದಿ ಬಟ್ಟೆ ಏಕೆ ಪ್ರೀತಿಸಬೇಕು ? | ಪರಿಸರಕ್ಕೆ ಹೇಗೆ ಪೂರಕ ? |

Share

ಇದು ಜೂನ್‌ ತಿಂಗಳು. ಪರಿಸರ ಪ್ರಿಯರಿಗೆ ಈ ತಿಂಗಳು ಅತೀ ಮಹತ್ವ. ಪ್ರತಿಯೊಬ್ಬರೂ ಪರಿಸರ ದಿನಾಚರಣೆ ಹಾಗೂ ಪರಿಸರದ ಬಗ್ಗೆಯೇ ಮಾತನಾಡುತ್ತಾರೆ. ಹೀಗಿರುವಾ ಪರಿಸರ ಸ್ನೇಹಿ ನಡೆಯನ್ನೂ ಅನುಸರಿಸಿದರೆ ಪರಿಸರ ದಿನಕ್ಕೂ ಹೆಚ್ಚು ಅರ್ಥ ಬರುತ್ತದೆ. ಇದಕ್ಕಾಗಿಯೇ ಖಾದಿ ಬಟ್ಟೆಯನ್ನೈ ಬಳಕೆ ಮಾಡಬೇಕು. ಖಾದಿ ಬಟ್ಟೆ ಪರಿಸರ ಸ್ನೇಹಿಯೂ, ಉದ್ಯೋಗ ಸೃಷ್ಟಿಯೂ, ಗ್ರಾಮೀಣ ಆರ್ಥಿಕತೆ ಹೆಚ್ಚಿಸಲೂ ಇದು ಸಹಕಾರಿಯಾಗುತ್ತದೆ. ಗ್ರಾಮೀಣ ಬದುಕುಗಳಿಗೆ ಸ್ವಾವಲಂಬನೆಯ ದಾರಿ ಸುಗಮವಾಗುತ್ತದೆ. ಖಾದಿ ಬಟ್ಟೆ ಏಕೆ ಪರಿಸರ ಸ್ನೇಹಿ ಎಂಬುದರ ಬಗ್ಗೆ ಉಡುಪಿ ಸೀರೆ ಹಾಗೂ ಕೈಮಗ್ಗ ಉಳಿವಿನ ಕಡೆಗೆ ಗಮನಹರಿಸುತ್ತಿರುವ ಕದಿಕೆ ಟ್ರಸ್ಟ್‌ ನ ಮಮತಾ ರೈ ಅವರ ಜೊತೆ ಮಾತುಕತೆ ನಡೆಸಿದ ಸಾರಾಂಶ ಇಲ್ಲಿದೆ…

ಖಾದಿ ಬಟ್ಟೆ ಈಚೆಗೆ ಹೆಚ್ಚು ಜನರ ಇಷ್ಟ ಪಡುತ್ತಾರೆ. ಇನ್ನೂ ಇದು ವ್ಯಾಪಕವಾಗಬೇಕು. ಖಾದಿ ಬಟ್ಟೆ ಬಳಕೆಯ ಕಾರಣದಿಂದ ಉದ್ಯೋಗ ಸೃಷ್ಟಿಯೂ, ಗ್ರಾಮೀಣ ಆರ್ಥಿಕತೆ ಹೆಚ್ಚಿಸಲೂ ಇದು ಸಹಕಾರಿಯಾಗುತ್ತದೆ. ಗ್ರಾಮೀಣ ಬದುಕುಗಳಿಗೆ ಸ್ವಾವಲಂಬನೆಯ ದಾರಿ ಸುಗಮವಾಗುತ್ತದೆ.

ಕೈಮಗ್ಗ ಖಾದಿ ಬಟ್ಟೆ ಪರಿಸರ ಸ್ನೇಹಿಯಾಗಿದೆ. ಯಾವುದೇ ಇಂಧನ ಅಗತ್ಯ ಇಲ್ಲ. ನೇಕಾರರ ಮಾನವ ಶ್ರಮದಿಂದಲೇ ತಯಾರಾಗುವ ಖಾದಿ ಉಡುಪುಗಳು, ಗ್ರಾಮೀಣ ಜನರಿಗೆ ಉದ್ಯೋಗಕ್ಕೂ ಕಾರಣವಾಗಿದೆ.  ಕೈಗಾರೀಕರಣದ ನಂತರ ಭೂಮಿಯ ತಾಪಮಾನ ಏರಿಕೆಯಾಗಿದೆ. ಇದರ ಪರಿಣಾಮ ಅಪಾರವಾಗಿದೆ. ಮಳೆಯ ಸಮಸ್ಯೆ ಸೇರಿದಂತೆ ವಾತಾವರಣದಲ್ಲಿ ಏರುಪೇರು ಕಂಡುಬಂದಿದೆ.  ಹೀಗಾಗಿ  ತಾಪಮಾನ ಇಳಿಕೆ ಅಗತ್ಯ ಇದೆ. ಇದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಇಂಗಾಲ ಕಡಿಮೆ ಹೊರಸೂಸುವ ಉದ್ದಿಮೆಗಳ ಅಗತ್ಯ ಇದೆ. ಈ ನೆಲೆಯಲ್ಲಿ ಖಾದಿಯಂತಹ ಬಟ್ಟೆಗಳ ಕಡೆಗೆ ಆಸಕ್ತವಾಗುವುದಿಂದ ಮಾನವ ಶ್ರಮದ ಮೂಲಕ ನಡೆಯುವ ಕೈಮಗ್ಗದಂತಹ ಉದ್ಯಮ ಬೆಳೆಯುತ್ತದೆ.

ಖಾದಿ ಪರಿಸರ ಸಹಜ ವಸ್ತು ಬಳಸಿ ತಯಾರಾಗುತ್ತವೆ. ಮರುಬಳಕೆ ಮಾಡಿ ಭೂಮಿಗೆ ಸೇರಿದಾಗಲೂ ಉಳಿಕೆ ಇಲ್ಲದೆ ಕರಗಿ ಭೂಮಿಗೆ ಸೇರುತ್ತದೆ.  ಅದೇ ನೈಲಾನ್‌, ಪ್ಲಾಸ್ಟಿಕ್‌ ಮೂಲವಸ್ತು ಇರುವ ಬಟ್ಟೆಗಳು ಪರಿಸಕ್ಕೆ ಹಾನಿ, ಭೂಮಿಗೆ ಸೇರುವುದಿಲ್ಲ. ಅದರ ಜೊತೆಗೆ ಖಾದಿಯಂತಹ ಉದ್ಯಮಗಳು ಗ್ರಾಮೀಣ ಭಾಗದಲ್ಲೂ ಉದ್ಯೋಗ ಸೃಷ್ಟಿ ಮಾಡುತ್ತದೆ, ಸ್ಥಳೀಯವಾಗಿ ಆರ್ಥಿಕತೆಯೂ ಬೆಳೆಯುತ್ತದೆ.

ಹೀಗಾಗಿ ಪರಿಸರ ಪ್ರಿಯರಾಗಿರುವ ಎಲ್ಲರೂ ಖಾದಿ ಬಟ್ಟೆಯ ಕಡೆಗೆ ಹೆಚ್ಚು ಗಮನ ಹರಿಸಿದರೆ ಎಲ್ಲಾ ರೀತಿಯಿಂದಲೂ ಉಪಯುಕ್ತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

3 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

13 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

14 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

16 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago