ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ | 5,494 ಮರಗಳ ತೆರವು : ಅಭಿವೃದ್ಧಿಯೇ..? ಪರಿಸರ ನಾಶವೇ..?

February 16, 2023
1:37 PM

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಮರಗಳ ಜಾತಿ ಮತ್ತು ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು. 

ಕಳೆದ ಮೇ ತಿಂಗಳಲ್ಲಿ ಮರಗಳ ಸಮೀಕ್ಷೆ ಪೂರ್ಣಗೊಂಡು, ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ 2022ರ ಜೂ.9ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಲಾಗಿತ್ತು. ಈ ಸಮಯ 35 ಕಿಮೀ ವ್ಯಾಪ್ತಿಯ ಈ ರಸ್ತೆಯನ್ನು ಹೆಚ್ಚು ನೇರಗೊಳಿಸುವ ಕುರಿತು ಆದೇಶ ಹೊರ ಬಿದ್ದ ಕಾರಣ ಅಹವಾಲು ಸ್ವೀಕಾರ ಸಭೆಯನ್ನು ಮುಂದೂಡಲಾಗಿತ್ತು.

ರಸ್ತೆ ನೇರಗೊಳ್ಳುವ ಕಾರಣ 35 ಕಿಮೀ ದೂರದ ವ್ಯಾಪ್ತಿ 33.1 ಕಿಮೀ.ಗೆ ಇಳಿಕೆಗೊಂಡು ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಇದರ ಪ್ರಕಾರ ಹಿಂದಿನ ರಸ್ತೆ ವ್ಯಾಪ್ತಿಯ ಹಲವಾರು ಸ್ಥಳಗಳು ಬದಲಾವಣೆಯಾಗಿ ರಸ್ತೆಯು ಕಾಡು ಪ್ರದೇಶಗಳಲ್ಲಿ ಹೆಚ್ಚು ಹಾದು ಹೋಗುವ ಕಾರಣದಿಂದ ಕಳೆದ ಬಾರಿಗಿಂತ ದುಪ್ಪಟ್ಟಿಗಿಂತಲೂ ಅಧಿಕ ಮರಗಳು ತೆರವು ಗೊಳ್ಳಬೇಕಾಗಿದೆ.

Advertisement

5,494 ಮರಗಳು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ 5 ಉಪವಲಯಗಳ ಮೂಲಕ ಕಳೆದ ಬಾರಿಯ ಸಮೀಕ್ಷೆಯಲ್ಲಿ ರಸ್ತೆ ಅಭಿವೃದ್ಧಿಗೆ 2,452 ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದರೆ ಮರು ಸಮೀಕ್ಷೆ ಪ್ರಕಾರ ಪಟ್ಟಾ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಕಳೆದ ಬಾರಿ ಗುರುತಿಸಲ್ಪಟ್ಟ ಕೆಲವು ಮರಗಳು ಹೊಸ ಸಮೀಕ್ಷೆಯಿಂದ ಹೊರ ಬಿದ್ದಿವೆ. ಮರಗಳ ಜಾತಿ ಹಾಗೂ ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಾಮಗಾರಿ ಆರಂಭ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಗಿಡಗಂಟಿ ತೆರವು ಕಾಮಗಾರಿ ಮಡಂತ್ಯಾರು ಕಡೆಯಿಂದ ನಡೆಯುತ್ತಿದೆ. ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಮರಗಳ ತೆರವು ನಡೆಯಲಿದ್ದು, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಗಲಿದೆ.

Advertisement
ತೆರವುಗೊಳ್ಳಬೇಕಾದ ಮರಗಳು :

ತೆರವುಗೊಳ್ಳಬೇಕಾದ ಮರಗಳ ವಿವರ:

Advertisement

ಉಪವಲಯ-          ಹಿಂದಿನ ಸಮೀಕ್ಷೆ                ಹೊಸ ಸಮೀಕ್ಷೆ

ಮಡಂತ್ಯಾರು:            224                                306

Advertisement

ಬೆಳ್ತಂಗಡಿ:                 952                               2,620

ಉಜಿರೆ:                      780                                968

Advertisement

ಚಿಬಿದ್ರೆ:                     127                                394

ಚಾರ್ಮಾಡಿ:             204                                 336

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror