ಸುದ್ದಿಗಳು

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ | 5,494 ಮರಗಳ ತೆರವು : ಅಭಿವೃದ್ಧಿಯೇ..? ಪರಿಸರ ನಾಶವೇ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಮರಗಳ ಜಾತಿ ಮತ್ತು ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಳೆದ ಮೇ ತಿಂಗಳಲ್ಲಿ ಮರಗಳ ಸಮೀಕ್ಷೆ ಪೂರ್ಣಗೊಂಡು, ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ 2022ರ ಜೂ.9ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಲಾಗಿತ್ತು. ಈ ಸಮಯ 35 ಕಿಮೀ ವ್ಯಾಪ್ತಿಯ ಈ ರಸ್ತೆಯನ್ನು ಹೆಚ್ಚು ನೇರಗೊಳಿಸುವ ಕುರಿತು ಆದೇಶ ಹೊರ ಬಿದ್ದ ಕಾರಣ ಅಹವಾಲು ಸ್ವೀಕಾರ ಸಭೆಯನ್ನು ಮುಂದೂಡಲಾಗಿತ್ತು.

Advertisement
Advertisement

ರಸ್ತೆ ನೇರಗೊಳ್ಳುವ ಕಾರಣ 35 ಕಿಮೀ ದೂರದ ವ್ಯಾಪ್ತಿ 33.1 ಕಿಮೀ.ಗೆ ಇಳಿಕೆಗೊಂಡು ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಇದರ ಪ್ರಕಾರ ಹಿಂದಿನ ರಸ್ತೆ ವ್ಯಾಪ್ತಿಯ ಹಲವಾರು ಸ್ಥಳಗಳು ಬದಲಾವಣೆಯಾಗಿ ರಸ್ತೆಯು ಕಾಡು ಪ್ರದೇಶಗಳಲ್ಲಿ ಹೆಚ್ಚು ಹಾದು ಹೋಗುವ ಕಾರಣದಿಂದ ಕಳೆದ ಬಾರಿಗಿಂತ ದುಪ್ಪಟ್ಟಿಗಿಂತಲೂ ಅಧಿಕ ಮರಗಳು ತೆರವು ಗೊಳ್ಳಬೇಕಾಗಿದೆ.

5,494 ಮರಗಳು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ 5 ಉಪವಲಯಗಳ ಮೂಲಕ ಕಳೆದ ಬಾರಿಯ ಸಮೀಕ್ಷೆಯಲ್ಲಿ ರಸ್ತೆ ಅಭಿವೃದ್ಧಿಗೆ 2,452 ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದರೆ ಮರು ಸಮೀಕ್ಷೆ ಪ್ರಕಾರ ಪಟ್ಟಾ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಕಳೆದ ಬಾರಿ ಗುರುತಿಸಲ್ಪಟ್ಟ ಕೆಲವು ಮರಗಳು ಹೊಸ ಸಮೀಕ್ಷೆಯಿಂದ ಹೊರ ಬಿದ್ದಿವೆ. ಮರಗಳ ಜಾತಿ ಹಾಗೂ ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಾಮಗಾರಿ ಆರಂಭ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಗಿಡಗಂಟಿ ತೆರವು ಕಾಮಗಾರಿ ಮಡಂತ್ಯಾರು ಕಡೆಯಿಂದ ನಡೆಯುತ್ತಿದೆ. ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಮರಗಳ ತೆರವು ನಡೆಯಲಿದ್ದು, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಗಲಿದೆ.
ತೆರವುಗೊಳ್ಳಬೇಕಾದ ಮರಗಳು :
Advertisement

ತೆರವುಗೊಳ್ಳಬೇಕಾದ ಮರಗಳ ವಿವರ:

ಉಪವಲಯ-          ಹಿಂದಿನ ಸಮೀಕ್ಷೆ                ಹೊಸ ಸಮೀಕ್ಷೆ

ಮಡಂತ್ಯಾರು:            224                                306

ಬೆಳ್ತಂಗಡಿ:                 952                               2,620

ಉಜಿರೆ:                      780                                968

Advertisement

ಚಿಬಿದ್ರೆ:                     127                                394

ಚಾರ್ಮಾಡಿ:             204                                 336

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

5 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago