Advertisement
ಸುದ್ದಿಗಳು

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ | 5,494 ಮರಗಳ ತೆರವು : ಅಭಿವೃದ್ಧಿಯೇ..? ಪರಿಸರ ನಾಶವೇ..?

Share

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಮರಗಳ ಜಾತಿ ಮತ್ತು ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಳೆದ ಮೇ ತಿಂಗಳಲ್ಲಿ ಮರಗಳ ಸಮೀಕ್ಷೆ ಪೂರ್ಣಗೊಂಡು, ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ 2022ರ ಜೂ.9ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಲಾಗಿತ್ತು. ಈ ಸಮಯ 35 ಕಿಮೀ ವ್ಯಾಪ್ತಿಯ ಈ ರಸ್ತೆಯನ್ನು ಹೆಚ್ಚು ನೇರಗೊಳಿಸುವ ಕುರಿತು ಆದೇಶ ಹೊರ ಬಿದ್ದ ಕಾರಣ ಅಹವಾಲು ಸ್ವೀಕಾರ ಸಭೆಯನ್ನು ಮುಂದೂಡಲಾಗಿತ್ತು.

ರಸ್ತೆ ನೇರಗೊಳ್ಳುವ ಕಾರಣ 35 ಕಿಮೀ ದೂರದ ವ್ಯಾಪ್ತಿ 33.1 ಕಿಮೀ.ಗೆ ಇಳಿಕೆಗೊಂಡು ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಇದರ ಪ್ರಕಾರ ಹಿಂದಿನ ರಸ್ತೆ ವ್ಯಾಪ್ತಿಯ ಹಲವಾರು ಸ್ಥಳಗಳು ಬದಲಾವಣೆಯಾಗಿ ರಸ್ತೆಯು ಕಾಡು ಪ್ರದೇಶಗಳಲ್ಲಿ ಹೆಚ್ಚು ಹಾದು ಹೋಗುವ ಕಾರಣದಿಂದ ಕಳೆದ ಬಾರಿಗಿಂತ ದುಪ್ಪಟ್ಟಿಗಿಂತಲೂ ಅಧಿಕ ಮರಗಳು ತೆರವು ಗೊಳ್ಳಬೇಕಾಗಿದೆ.

5,494 ಮರಗಳು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ 5 ಉಪವಲಯಗಳ ಮೂಲಕ ಕಳೆದ ಬಾರಿಯ ಸಮೀಕ್ಷೆಯಲ್ಲಿ ರಸ್ತೆ ಅಭಿವೃದ್ಧಿಗೆ 2,452 ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದರೆ ಮರು ಸಮೀಕ್ಷೆ ಪ್ರಕಾರ ಪಟ್ಟಾ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಕಳೆದ ಬಾರಿ ಗುರುತಿಸಲ್ಪಟ್ಟ ಕೆಲವು ಮರಗಳು ಹೊಸ ಸಮೀಕ್ಷೆಯಿಂದ ಹೊರ ಬಿದ್ದಿವೆ. ಮರಗಳ ಜಾತಿ ಹಾಗೂ ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಾಮಗಾರಿ ಆರಂಭ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಗಿಡಗಂಟಿ ತೆರವು ಕಾಮಗಾರಿ ಮಡಂತ್ಯಾರು ಕಡೆಯಿಂದ ನಡೆಯುತ್ತಿದೆ. ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಮರಗಳ ತೆರವು ನಡೆಯಲಿದ್ದು, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಗಲಿದೆ.
ತೆರವುಗೊಳ್ಳಬೇಕಾದ ಮರಗಳು :

ತೆರವುಗೊಳ್ಳಬೇಕಾದ ಮರಗಳ ವಿವರ:

ಉಪವಲಯ-          ಹಿಂದಿನ ಸಮೀಕ್ಷೆ                ಹೊಸ ಸಮೀಕ್ಷೆ

ಮಡಂತ್ಯಾರು:            224                                306

ಬೆಳ್ತಂಗಡಿ:                 952                               2,620

ಉಜಿರೆ:                      780                                968

ಚಿಬಿದ್ರೆ:                     127                                394

ಚಾರ್ಮಾಡಿ:             204                                 336

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

5 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

16 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

17 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago