ಕಳೆದ ಮೇ ತಿಂಗಳಲ್ಲಿ ಮರಗಳ ಸಮೀಕ್ಷೆ ಪೂರ್ಣಗೊಂಡು, ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ 2022ರ ಜೂ.9ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಲಾಗಿತ್ತು. ಈ ಸಮಯ 35 ಕಿಮೀ ವ್ಯಾಪ್ತಿಯ ಈ ರಸ್ತೆಯನ್ನು ಹೆಚ್ಚು ನೇರಗೊಳಿಸುವ ಕುರಿತು ಆದೇಶ ಹೊರ ಬಿದ್ದ ಕಾರಣ ಅಹವಾಲು ಸ್ವೀಕಾರ ಸಭೆಯನ್ನು ಮುಂದೂಡಲಾಗಿತ್ತು.
ರಸ್ತೆ ನೇರಗೊಳ್ಳುವ ಕಾರಣ 35 ಕಿಮೀ ದೂರದ ವ್ಯಾಪ್ತಿ 33.1 ಕಿಮೀ.ಗೆ ಇಳಿಕೆಗೊಂಡು ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಇದರ ಪ್ರಕಾರ ಹಿಂದಿನ ರಸ್ತೆ ವ್ಯಾಪ್ತಿಯ ಹಲವಾರು ಸ್ಥಳಗಳು ಬದಲಾವಣೆಯಾಗಿ ರಸ್ತೆಯು ಕಾಡು ಪ್ರದೇಶಗಳಲ್ಲಿ ಹೆಚ್ಚು ಹಾದು ಹೋಗುವ ಕಾರಣದಿಂದ ಕಳೆದ ಬಾರಿಗಿಂತ ದುಪ್ಪಟ್ಟಿಗಿಂತಲೂ ಅಧಿಕ ಮರಗಳು ತೆರವು ಗೊಳ್ಳಬೇಕಾಗಿದೆ.
5,494 ಮರಗಳು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ 5 ಉಪವಲಯಗಳ ಮೂಲಕ ಕಳೆದ ಬಾರಿಯ ಸಮೀಕ್ಷೆಯಲ್ಲಿ ರಸ್ತೆ ಅಭಿವೃದ್ಧಿಗೆ 2,452 ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದರೆ ಮರು ಸಮೀಕ್ಷೆ ಪ್ರಕಾರ ಪಟ್ಟಾ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಕಳೆದ ಬಾರಿ ಗುರುತಿಸಲ್ಪಟ್ಟ ಕೆಲವು ಮರಗಳು ಹೊಸ ಸಮೀಕ್ಷೆಯಿಂದ ಹೊರ ಬಿದ್ದಿವೆ. ಮರಗಳ ಜಾತಿ ಹಾಗೂ ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.
ಕಾಮಗಾರಿ ಆರಂಭ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಗಿಡಗಂಟಿ ತೆರವು ಕಾಮಗಾರಿ ಮಡಂತ್ಯಾರು ಕಡೆಯಿಂದ ನಡೆಯುತ್ತಿದೆ. ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಮರಗಳ ತೆರವು ನಡೆಯಲಿದ್ದು, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಗಲಿದೆ.ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…