Advertisement
ಸುದ್ದಿಗಳು

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ | 5,494 ಮರಗಳ ತೆರವು : ಅಭಿವೃದ್ಧಿಯೇ..? ಪರಿಸರ ನಾಶವೇ..?

Share

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ 2ನೇ ಹಂತದ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವಿಸ್ತಾರಕ್ಕೆ ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆ ಪೂರ್ಣಗೊಂಡಿದೆ. ಅದರಂತೆ ಪಟ್ಟಾ, ಕಂದಾಯ ಮತ್ತು ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಮರಗಳ ಜಾತಿ ಮತ್ತು ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಳೆದ ಮೇ ತಿಂಗಳಲ್ಲಿ ಮರಗಳ ಸಮೀಕ್ಷೆ ಪೂರ್ಣಗೊಂಡು, ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ 2022ರ ಜೂ.9ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆ ನಿಗದಿಪಡಿಸಲಾಗಿತ್ತು. ಈ ಸಮಯ 35 ಕಿಮೀ ವ್ಯಾಪ್ತಿಯ ಈ ರಸ್ತೆಯನ್ನು ಹೆಚ್ಚು ನೇರಗೊಳಿಸುವ ಕುರಿತು ಆದೇಶ ಹೊರ ಬಿದ್ದ ಕಾರಣ ಅಹವಾಲು ಸ್ವೀಕಾರ ಸಭೆಯನ್ನು ಮುಂದೂಡಲಾಗಿತ್ತು.

ರಸ್ತೆ ನೇರಗೊಳ್ಳುವ ಕಾರಣ 35 ಕಿಮೀ ದೂರದ ವ್ಯಾಪ್ತಿ 33.1 ಕಿಮೀ.ಗೆ ಇಳಿಕೆಗೊಂಡು ತೆರವುಗೊಳ್ಳಬೇಕಾದ ಮರಗಳ ಮರು ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ಇದರ ಪ್ರಕಾರ ಹಿಂದಿನ ರಸ್ತೆ ವ್ಯಾಪ್ತಿಯ ಹಲವಾರು ಸ್ಥಳಗಳು ಬದಲಾವಣೆಯಾಗಿ ರಸ್ತೆಯು ಕಾಡು ಪ್ರದೇಶಗಳಲ್ಲಿ ಹೆಚ್ಚು ಹಾದು ಹೋಗುವ ಕಾರಣದಿಂದ ಕಳೆದ ಬಾರಿಗಿಂತ ದುಪ್ಪಟ್ಟಿಗಿಂತಲೂ ಅಧಿಕ ಮರಗಳು ತೆರವು ಗೊಳ್ಳಬೇಕಾಗಿದೆ.

5,494 ಮರಗಳು: ಬೆಳ್ತಂಗಡಿ ತಾಲೂಕಿನ ಅರಣ್ಯ ಇಲಾಖೆಯ 5 ಉಪವಲಯಗಳ ಮೂಲಕ ಕಳೆದ ಬಾರಿಯ ಸಮೀಕ್ಷೆಯಲ್ಲಿ ರಸ್ತೆ ಅಭಿವೃದ್ಧಿಗೆ 2,452 ಮರಗಳನ್ನು ತೆರವುಗೊಳಿಸಲು ಗುರುತಿಸಲಾಗಿತ್ತು. ಆದರೆ ಮರು ಸಮೀಕ್ಷೆ ಪ್ರಕಾರ ಪಟ್ಟಾ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸೇರಿದ 5,494 ಮರಗಳು ತೆರವುಗೊಳ್ಳಬೇಕಾಗಿದೆ. ಕಳೆದ ಬಾರಿ ಗುರುತಿಸಲ್ಪಟ್ಟ ಕೆಲವು ಮರಗಳು ಹೊಸ ಸಮೀಕ್ಷೆಯಿಂದ ಹೊರ ಬಿದ್ದಿವೆ. ಮರಗಳ ಜಾತಿ ಹಾಗೂ ಅವುಗಳ ಗಾತ್ರಕ್ಕನುಗುಣವಾಗಿ ತೆರವುಗೊಳ್ಳುವ ಪ್ರತಿ ಮರಕ್ಕೆ ಇಲಾಖೆ ದರ ನಿಗದಿಪಡಿಸಲಿದೆ. ತೆರವುಗೊಳ್ಳುವ ಮರವೊಂದರ ಹತ್ತು ಪಟ್ಟು ದರವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಪಾವತಿಸಬೇಕು.

ಕಾಮಗಾರಿ ಆರಂಭ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಗಿಡಗಂಟಿ ತೆರವು ಕಾಮಗಾರಿ ಮಡಂತ್ಯಾರು ಕಡೆಯಿಂದ ನಡೆಯುತ್ತಿದೆ. ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಮರಗಳ ತೆರವು ನಡೆಯಲಿದ್ದು, ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ಸಿಗಲಿದೆ.
ತೆರವುಗೊಳ್ಳಬೇಕಾದ ಮರಗಳು :

ತೆರವುಗೊಳ್ಳಬೇಕಾದ ಮರಗಳ ವಿವರ:

ಉಪವಲಯ-          ಹಿಂದಿನ ಸಮೀಕ್ಷೆ                ಹೊಸ ಸಮೀಕ್ಷೆ

ಮಡಂತ್ಯಾರು:            224                                306

ಬೆಳ್ತಂಗಡಿ:                 952                               2,620

ಉಜಿರೆ:                      780                                968

ಚಿಬಿದ್ರೆ:                     127                                394

ಚಾರ್ಮಾಡಿ:             204                                 336

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

21 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago