Advertisement
MIRROR FOCUS

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ | ದ ಕ ಜಿಲ್ಲಾಧಿಕಾರಿ ಭೇಟಿ

Share

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಕಡೆ ಗುಡ್ಡ ಜರಿತ, ನೆರೆ, ಮನೆ ಕುಸಿತ ಮತ್ತಿತರ ಘಟನೆಗಳು ನಡೆದಿರುವ ಸ್ಥಳಗಳಿಗೆ  ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಗುರುವಾರ ಭೇಟಿ ನೀಡಿದರು.

ನಗರದ ಸಕ್ರ್ಯೂಟ್ ಹೌಸ್ ಪಕ್ಕದ ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ  ಜಿಲ್ಲಾಧಿಕಾರಿಗಳು  ಬುಧವಾರ ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ನಗರದ ವಿವಿಧ ಕಡೆ ಮಳೆಹಾನಿ ಮತ್ತು ನೀರು ನಿಂತ ಸ್ಥಳಗಳಿಗೆ ಭೇಟಿ ನೀಡಿದರು. ಪಂಪ್‍ವೆಲ್  ವೃತ್ತಕ್ಕೆ ಭೇಟಿ ನೀಡಿದ ಅವರು  ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುವುದನ್ನು ಗಮನಿಸಿ  ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಲು ನಗರಪಾಲಿಕೆಗೆ ಸೂಚಿಸಿದರು. ಕೊಟ್ಟಾರ, ಚೌಕಿ, ಕಾವೂರು ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಮಾಧಾನ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳು ಬಜ್ಪೆ ಸಮೀಪದ ಕೊಂಚಾರು ಎಂ.ಎಸ್.ಇ.ಝೆಡ್ ಪ್ರದೇಶದಲ್ಲಿ ಗುಡ್ಡ ಕುಸಿತ  ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಇಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ  ಎಸ್.ಇ.ಝೆಡ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಬಳಿಕ ಕೆಂಜಾರು ಕೋಸ್ಟ್‍ಗಾರ್ಡ್‍ಗೆ   ಕಾದಿರಿಸಿದ ಪ್ರದೇಶದಲ್ಲಿ ನೀರು ನಿಂತ ಸ್ಥಳವನ್ನು ಪರಿಶೀಲಿಸಿದರು. ಮಳೆ ಹಾನಿಯಿಂದ ತೊಂದರೆಗಳಾದ ಸಂತ್ರಸ್ತರೊಂದಿಗೆ ಜಿಲ್ಲಾಧಿಕಾರಿಗಳು ಸಮಾಲೋಚಿಸಿ  ಅಗತ್ಯವಿರುವ ಎಲ್ಲಾ ನೆರವು ಮತ್ತು ಪರಿಹಾರವನ್ನು ಒದಗಿಸುವುದಾಗಿ   ಭರವಸೆ ನೀಡಿದರು.

ಆಯಾ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ  ಅವರು ಸೂಚನೆ ನೀಡಿದರು. ರಸ್ತೆ ಸಂಚಾರಕ್ಕೆ ಅಡಚಣೆಯಾಗಿರುವ  ಕಡೆ ತಾತ್ಕಾಲಿಕ ಮತ್ತು ಶಾಶ್ವತ ಕ್ರಮಕೈಗೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾಧಿಕಾರಿ ಭೇಟಿ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ  ವಿನಾಯಕ್ ಕರ್ಭಾರಿ , ಅಪರ ಜಿಲ್ಲಾಧಿಕಾರಿ  ಡಾ. ಜಿ ಸಂತೋಷ್ ಕುಮಾರ್,    ಮಂಗಳೂರು ಉಪವಿಭಾಗಾಧಿಕಾರಿ  ಹರ್ಷವರ್ಧನ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್  ಮತ್ತಿತರರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

13 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

20 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

21 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago