ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ ಹಲವೆಡೆ ಇಂದಿನಿಂದ ಇದೇ 14 ರವರೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೀದರ್ ಕಲ್ಬುರ್ಗಿ ಗದಗ ರಾಯಚೂರು ಚಿತ್ರದುರ್ಗ ಕೋಲಾರ ಕೊಡಗಿನಲ್ಲೂ ಇದೇ 14 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, eಲ್ಲೋ ಅಲರ್ಟ್ ಘೋಷಿಸಲಾಗಿದೆ.
ನೈಋತ್ಯ ಮಾನ್ಸೂನ್ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


