ಎಪ್ರಿಲ್ ತಿಂಗಳ 19ರಿಂದ 22ರವರೆಗೆ ಜರ್ಮನಿಯ ಬರ್ಲಿನ್ನಲ್ಲಿ ನಡೆಯಲಿರುವ ವಿಕಿಮೀಡಿಯ ಸಮಿತ್ 2024ಕ್ಕೆ ಭರತೇಶ ಅಲಸಂಡೆಮಜಲು ಇವರು ಅಯ್ಕೆಯಾಗಿದ್ದಾರೆ.
ಮಂಗಳೂರಿನ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ ಸದಸ್ಯರಾದ ಇವರು ತುಳು ಮತ್ತು ಕನ್ನಡ ಭಾಷೆಯ ರಾಯಭಾರಿಯಾಗಿ ಈ ಸಮ್ಮಿಳನವನ್ನು ಪ್ರತಿನಿಧಿಸಲಿದ್ದಾರೆ. ಈ ವಿಕಿಮೀಡಿಯನ್ ಸಮಿತ್ನಲ್ಲಿ 100ಕ್ಕಿಂತ ಹೆಚ್ಚು ದೇಶಗಳ 150ಕ್ಕಿಂತ ಹೆಚ್ಚು ಬಹುಭಾಷಿಕರೊಂದಿಗೆ ಭಾಗವಹಿಸಿ ವಿಕಿಮೂಮೆಂಟ್ 2030 ಕಾರ್ಯರೂಪ, ಪ್ರಾದೇಶಿಕ ಗುಂಪುಗಳ ಅವಲೋಕನ, ಭಾಷೆಗಳ ಸವಾಲುಗಳ ಬಗೆಗಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.
ಇವರು ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಗೌಡ ಎ ಹಾಗೂ ಗಿರಿಜಾ ಎ ಬಿ. ದಂಪತಿಗಳ ಮಗ. ಪ್ರಸ್ತುತ ಬ್ಯಾಂಕ್ ಆಫ್ ಬರೋಡದ ಉದ್ಯೋಗಿಯಾಗಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು. ಇತ್ತಿಚೇಗೆ ವಿಕಿಮೀಡಿಯ ಪೌಂಢೇಶನ್ನ ಸಹಯೋಗದಲ್ಲಿ ಇವರ ನಿರ್ಮಾಪಕತ್ವದಲ್ಲಿ ತಯಾರಾದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಪುರ್ಸಕಟ್ಟುನ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು. ಇವರು ತುಳು, ಕನ್ನಡ ಬರಹಗಾರರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…