ಎಪ್ರಿಲ್ ತಿಂಗಳ 19ರಿಂದ 22ರವರೆಗೆ ಜರ್ಮನಿಯ ಬರ್ಲಿನ್ನಲ್ಲಿ ನಡೆಯಲಿರುವ ವಿಕಿಮೀಡಿಯ ಸಮಿತ್ 2024ಕ್ಕೆ ಭರತೇಶ ಅಲಸಂಡೆಮಜಲು ಇವರು ಅಯ್ಕೆಯಾಗಿದ್ದಾರೆ.
ಮಂಗಳೂರಿನ ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪಿನ ಸಕ್ರಿಯ ಸದಸ್ಯರಾದ ಇವರು ತುಳು ಮತ್ತು ಕನ್ನಡ ಭಾಷೆಯ ರಾಯಭಾರಿಯಾಗಿ ಈ ಸಮ್ಮಿಳನವನ್ನು ಪ್ರತಿನಿಧಿಸಲಿದ್ದಾರೆ. ಈ ವಿಕಿಮೀಡಿಯನ್ ಸಮಿತ್ನಲ್ಲಿ 100ಕ್ಕಿಂತ ಹೆಚ್ಚು ದೇಶಗಳ 150ಕ್ಕಿಂತ ಹೆಚ್ಚು ಬಹುಭಾಷಿಕರೊಂದಿಗೆ ಭಾಗವಹಿಸಿ ವಿಕಿಮೂಮೆಂಟ್ 2030 ಕಾರ್ಯರೂಪ, ಪ್ರಾದೇಶಿಕ ಗುಂಪುಗಳ ಅವಲೋಕನ, ಭಾಷೆಗಳ ಸವಾಲುಗಳ ಬಗೆಗಿನ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.
ಇವರು ಪುತ್ತೂರು ತಾಲೂಕಿನ ಪೆರ್ಲಂಪಾಡಿಯ ಅಲಸಂಡೆಮಜಲು ಮನೆ ಬೋಜಪ್ಪ ಗೌಡ ಎ ಹಾಗೂ ಗಿರಿಜಾ ಎ ಬಿ. ದಂಪತಿಗಳ ಮಗ. ಪ್ರಸ್ತುತ ಬ್ಯಾಂಕ್ ಆಫ್ ಬರೋಡದ ಉದ್ಯೋಗಿಯಾಗಿದ್ದು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು. ಇತ್ತಿಚೇಗೆ ವಿಕಿಮೀಡಿಯ ಪೌಂಢೇಶನ್ನ ಸಹಯೋಗದಲ್ಲಿ ಇವರ ನಿರ್ಮಾಪಕತ್ವದಲ್ಲಿ ತಯಾರಾದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ಪುರ್ಸಕಟ್ಟುನ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು. ಇವರು ತುಳು, ಕನ್ನಡ ಬರಹಗಾರರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…