ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ

February 21, 2024
7:57 PM

ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ ದುರ್ಗಾ ಪ್ರಸನ್ನ ಹೇಳಿದರು.

ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು, ವಿಕಿಪೀಡಿಯ ಜ್ಞಾನ ಪಡೆಯುದರ ಜೊತೆಗೆ ಜ್ಞಾನವನ್ನು ಹಂಚುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿರುದರಿಂದ ಪ್ರತಿಯೊಬ್ಬರಿಗೂ ಅರ್ಥಮಾಡಿಕೊಳ್ಳಬಹುದಾದ ಸುಲಭ ಮಾರ್ಗ ಇದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ನಿರ್ದೇಶಕ ಡಾ. ಶ್ರೀಧರ್ ಎಚ್. ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಇದರ ಬಳಕೆ ಇರಲಿಲ್ಲ ಹೀಗಾಗಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ ಎಲ್ಲಿ ತಂತ್ರಜ್ಞಾನದ ಯುಗ ಆರಂಭವಾಯಿತೋ ಬೆರಳ ತುದಿಯಲ್ಲಿಯೇ ಮಾಹಿತಿಗಳನ್ನು ಕಲೆ ಹಾಕಲು ಸರಳ ಮಾರ್ಗ ಸಿಕ್ಕಂತಾಗಿದೆ. ಮಾಹಿತಿಗಳು ಎಷ್ಟು ನಿಜ, ಎಷ್ಟು ಸುಳ್ಳು ಎನ್ನುವುದನ್ನು ಪರಿಶೀಲಿಸಿ ನೋಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ ಶುಭ ಕೋರಿದರು.

ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಅಕ್ಷಯ್ ಕುಮಾರ್ ರೈ ಸ್ವಾಗತಿಸಿ, ಉಪನ್ಯಾಸಕ ಸುತನ್ ಕೇವಳ ವಂದಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಹರಿಪ್ರಸಾದ್ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror