ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ ದುರ್ಗಾ ಪ್ರಸನ್ನ ಹೇಳಿದರು.
ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು, ವಿಕಿಪೀಡಿಯ ಜ್ಞಾನ ಪಡೆಯುದರ ಜೊತೆಗೆ ಜ್ಞಾನವನ್ನು ಹಂಚುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿರುದರಿಂದ ಪ್ರತಿಯೊಬ್ಬರಿಗೂ ಅರ್ಥಮಾಡಿಕೊಳ್ಳಬಹುದಾದ ಸುಲಭ ಮಾರ್ಗ ಇದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ನಿರ್ದೇಶಕ ಡಾ. ಶ್ರೀಧರ್ ಎಚ್. ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಇದರ ಬಳಕೆ ಇರಲಿಲ್ಲ ಹೀಗಾಗಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ ಎಲ್ಲಿ ತಂತ್ರಜ್ಞಾನದ ಯುಗ ಆರಂಭವಾಯಿತೋ ಬೆರಳ ತುದಿಯಲ್ಲಿಯೇ ಮಾಹಿತಿಗಳನ್ನು ಕಲೆ ಹಾಕಲು ಸರಳ ಮಾರ್ಗ ಸಿಕ್ಕಂತಾಗಿದೆ. ಮಾಹಿತಿಗಳು ಎಷ್ಟು ನಿಜ, ಎಷ್ಟು ಸುಳ್ಳು ಎನ್ನುವುದನ್ನು ಪರಿಶೀಲಿಸಿ ನೋಡಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ ಶುಭ ಕೋರಿದರು.
ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಅಕ್ಷಯ್ ಕುಮಾರ್ ರೈ ಸ್ವಾಗತಿಸಿ, ಉಪನ್ಯಾಸಕ ಸುತನ್ ಕೇವಳ ವಂದಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಹರಿಪ್ರಸಾದ್ ನಿರೂಪಿಸಿದರು.
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…
ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…
ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…