Advertisement
ಸುದ್ದಿಗಳು

ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ

Share

ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ ದುರ್ಗಾ ಪ್ರಸನ್ನ ಹೇಳಿದರು.

ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು, ವಿಕಿಪೀಡಿಯ ಜ್ಞಾನ ಪಡೆಯುದರ ಜೊತೆಗೆ ಜ್ಞಾನವನ್ನು ಹಂಚುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿರುದರಿಂದ ಪ್ರತಿಯೊಬ್ಬರಿಗೂ ಅರ್ಥಮಾಡಿಕೊಳ್ಳಬಹುದಾದ ಸುಲಭ ಮಾರ್ಗ ಇದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ನಿರ್ದೇಶಕ ಡಾ. ಶ್ರೀಧರ್ ಎಚ್. ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಇದರ ಬಳಕೆ ಇರಲಿಲ್ಲ ಹೀಗಾಗಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ ಎಲ್ಲಿ ತಂತ್ರಜ್ಞಾನದ ಯುಗ ಆರಂಭವಾಯಿತೋ ಬೆರಳ ತುದಿಯಲ್ಲಿಯೇ ಮಾಹಿತಿಗಳನ್ನು ಕಲೆ ಹಾಕಲು ಸರಳ ಮಾರ್ಗ ಸಿಕ್ಕಂತಾಗಿದೆ. ಮಾಹಿತಿಗಳು ಎಷ್ಟು ನಿಜ, ಎಷ್ಟು ಸುಳ್ಳು ಎನ್ನುವುದನ್ನು ಪರಿಶೀಲಿಸಿ ನೋಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ ಶುಭ ಕೋರಿದರು.

ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಅಕ್ಷಯ್ ಕುಮಾರ್ ರೈ ಸ್ವಾಗತಿಸಿ, ಉಪನ್ಯಾಸಕ ಸುತನ್ ಕೇವಳ ವಂದಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಹರಿಪ್ರಸಾದ್ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

8 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

9 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

9 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

9 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

9 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago