ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ ದುರ್ಗಾ ಪ್ರಸನ್ನ ಹೇಳಿದರು.
ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು, ವಿಕಿಪೀಡಿಯ ಜ್ಞಾನ ಪಡೆಯುದರ ಜೊತೆಗೆ ಜ್ಞಾನವನ್ನು ಹಂಚುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿರುದರಿಂದ ಪ್ರತಿಯೊಬ್ಬರಿಗೂ ಅರ್ಥಮಾಡಿಕೊಳ್ಳಬಹುದಾದ ಸುಲಭ ಮಾರ್ಗ ಇದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ನಿರ್ದೇಶಕ ಡಾ. ಶ್ರೀಧರ್ ಎಚ್. ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಇದರ ಬಳಕೆ ಇರಲಿಲ್ಲ ಹೀಗಾಗಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ ಎಲ್ಲಿ ತಂತ್ರಜ್ಞಾನದ ಯುಗ ಆರಂಭವಾಯಿತೋ ಬೆರಳ ತುದಿಯಲ್ಲಿಯೇ ಮಾಹಿತಿಗಳನ್ನು ಕಲೆ ಹಾಕಲು ಸರಳ ಮಾರ್ಗ ಸಿಕ್ಕಂತಾಗಿದೆ. ಮಾಹಿತಿಗಳು ಎಷ್ಟು ನಿಜ, ಎಷ್ಟು ಸುಳ್ಳು ಎನ್ನುವುದನ್ನು ಪರಿಶೀಲಿಸಿ ನೋಡಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ ಶುಭ ಕೋರಿದರು.
ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಅಕ್ಷಯ್ ಕುಮಾರ್ ರೈ ಸ್ವಾಗತಿಸಿ, ಉಪನ್ಯಾಸಕ ಸುತನ್ ಕೇವಳ ವಂದಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಹರಿಪ್ರಸಾದ್ ನಿರೂಪಿಸಿದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…