ಮಾಹಿತಿ ಎಲ್ಲಿಂದ, ಯಾವ ಮೂಲದಿಂದ ಹಂಚುತ್ತಿದ್ದೇವೆ ಎಂದು ತಿಳಿಯುವುದು ಮುಖ್ಯ. ಅಕ್ಷರದೋಷಗಳ ತಿದ್ದುಪಡಿ ಮಾಡುವುದು, ಸರಳಭಾಷೆಯಲ್ಲಿ ತಿಳಿಯದ ವಿಷಯವನ್ನು ಜನ ಸಾಮಾನ್ಯರಿಗೆ ತಲುಪಿಸವುದಕ್ಕೆ ವಿಕಿಪೀಡಿಯ ಎಂಬ ಆಧುನಿಕ ತಂತ್ರಜ್ಞಾನದ ಮೂಲಕ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಪ್ರಾಧ್ಯಪಕಿ ದುರ್ಗಾ ಪ್ರಸನ್ನ ಹೇಳಿದರು.
ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐ ಕ್ಯೂ ಎ ಸಿ ಇದರ ಆಶ್ರಯದಲ್ಲಿ ನಡೆದ ವಿಕಿಪೀಡಿಯ ಕಾರ್ಯಗಾರದ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು, ವಿಕಿಪೀಡಿಯ ಜ್ಞಾನ ಪಡೆಯುದರ ಜೊತೆಗೆ ಜ್ಞಾನವನ್ನು ಹಂಚುವ ಕಾರ್ಯ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಿರುದರಿಂದ ಪ್ರತಿಯೊಬ್ಬರಿಗೂ ಅರ್ಥಮಾಡಿಕೊಳ್ಳಬಹುದಾದ ಸುಲಭ ಮಾರ್ಗ ಇದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಹಾಗೂ ನಿರ್ದೇಶಕ ಡಾ. ಶ್ರೀಧರ್ ಎಚ್. ಜಿ ಮಾತನಾಡಿ, ಹಿಂದಿನ ಕಾಲದಲ್ಲಿ ಇದರ ಬಳಕೆ ಇರಲಿಲ್ಲ ಹೀಗಾಗಿ ಸಾಕಷ್ಟು ಸವಾಲು ಎದುರಿಸಬೇಕಾಯಿತು. ಆದರೆ ಎಲ್ಲಿ ತಂತ್ರಜ್ಞಾನದ ಯುಗ ಆರಂಭವಾಯಿತೋ ಬೆರಳ ತುದಿಯಲ್ಲಿಯೇ ಮಾಹಿತಿಗಳನ್ನು ಕಲೆ ಹಾಕಲು ಸರಳ ಮಾರ್ಗ ಸಿಕ್ಕಂತಾಗಿದೆ. ಮಾಹಿತಿಗಳು ಎಷ್ಟು ನಿಜ, ಎಷ್ಟು ಸುಳ್ಳು ಎನ್ನುವುದನ್ನು ಪರಿಶೀಲಿಸಿ ನೋಡಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಬಿ ಶುಭ ಕೋರಿದರು.
ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕ ಅಕ್ಷಯ್ ಕುಮಾರ್ ರೈ ಸ್ವಾಗತಿಸಿ, ಉಪನ್ಯಾಸಕ ಸುತನ್ ಕೇವಳ ವಂದಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಹರಿಪ್ರಸಾದ್ ನಿರೂಪಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…