ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

May 5, 2025
10:56 PM

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

Advertisement

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟವಾಗಿದೆ | ಬೆಳೆ ವಿಮೆ ಪರಿಹಾರ ಕಡಿಮೆಯಾಗಿದೆ.. ಮುಂದೇನು ಮಾಡಬಹುದು..?
December 9, 2025
8:04 AM
by: ಮಹೇಶ್ ಪುಚ್ಚಪ್ಪಾಡಿ
ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ
December 8, 2025
8:57 PM
by: ರೂರಲ್‌ ಮಿರರ್ ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ
December 7, 2025
3:31 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror