Advertisement
MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

Advertisement

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

1 hour ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

10 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

14 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

15 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

15 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

24 hours ago