ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.
ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.
ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.
ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು. ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.
ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…