MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

Advertisement
Advertisement

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

Advertisement

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

13 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

13 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

14 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

14 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

14 hours ago