MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

Advertisement
Advertisement

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

Advertisement

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

1 hour ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

21 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

22 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

23 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago