Advertisement
MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

Advertisement

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

Advertisement

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 hour ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

10 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago