Advertisement
MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

4 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago