Advertisement
MIRROR FOCUS

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

Share

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ ಪುರಸ್ಕರಿಸಿ, ಈಗಾಗಲೇ ಸುತ್ತೋಲೆ ಹೊರಡಿಸಿದೆ.  

ಅದರಂತೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕಳೇಬರವನ್ನು ಹಾಗೆಯೇ ಬಿಡಲಾಗುತ್ತಿದೆ. ಸ್ವಾಭಾವಿಕ ಹಾಗೂ ಅಸ್ವಾಭಾವಿಕವಾಗಿ ಮೃತಪಡುವ ಹುಲಿಗಳು ಮತ್ತು ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪುವ ಪ್ರಾಣಿಗಳಿಗೆ ಇದು ಅನ್ವಯಿಸುವುದಿಲ್ಲ. ಅಂತಹ ಪ್ರಾಣಿಗಳ ಕಳೇಬರವನ್ನು ನಿಯಮಾನುಸಾರ ಸುಡಲಾಗುತ್ತದೆ. ಸುಡದೆ ಬಿಡುವ ಇತರೆ ಪ್ರಾಣಿಗಳ ಮೃತದೇಹದಿಂದ ಬೇರೆ ಪ್ರಾಣಿಗಳಿಗೆ ಆಹಾರ ಒದಗಿಸಿ, ಪ್ರಕೃತಿ ಚಕ್ರ ಸಾಗಲು ಸಹಕರಿಸಲಾಗುತ್ತಿದೆ.

ಈ ಸಂದರ್ಭ ಮಾತನಾಡಿದ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ, ಪ್ರಾಣಿ, ಪಕ್ಷಿಗಳ ಆಹಾರ, ಅವುಗಳ ಸಾವಿನಿಂದ ಪ್ರಕೃತಿಗೆ ಆಗುವ ಅನುಕೂಲದ ಬಗ್ಗೆ ಹಾಗೂ ಪ್ರಕೃತಿಯ ಚಕ್ರವನ್ನು ಉಳಿಸುವ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಸರ್ಕಾರ ಅದಕ್ಕೆ ಸಮ್ಮತಿ ಸೂಚಿಸಿರುವುದು ಸಂತಸದ ಸಂಗತಿ ಎಂದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

ಬಿಳಿಗಿರಿ ರಂಗನಾಥಸ್ವಾಮಿ ಹುಲಿಸಂರಕ್ಷಿತ ಪ್ರದೇಶದ ಹುಲಿಯೋಜನೆ ನಿರ್ದೇಶಕ ಶ್ರೀಪತಿ, ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದರೆ ನಿಯಮಾನುಸಾರ ಅವುಗಳ ಅಂತ್ಯಕ್ರಿಯೆ ನಡೆಸಲಾಗುವುದು. ಇಲ್ಲವಾದಲ್ಲಿ ಹಾಗೆಯೇ ಬಿಡಲಾಗುವುದು.  ಇದರಿಂದ ಪ್ರಾಣಿ, ಪಕ್ಷಿ, ಪ್ರಕೃತಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.

ಚಾಮರಾಜನಗರ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್, ಹುಲಿ ಹಾಗೂ ಸಾಂಕ್ರಾಮಿಕ ರೋಗದಿಂದ ಮೃತಪಡುವ ಪ್ರಾಣಿ, ಪಕ್ಷಿ ಹೊರತುಪಡಿಸಿ ನೈಸರ್ಗಿಕವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಹಾಗೆಯೇ ಕೊಳೆಯಲು ಬಿಡಲಾಗುವುದು ಎಂದು ಹೇಳಿದರು.

ಪರಿಸರ ಸಂಬಂಧಿತ ಸುದ್ದಿಗಳಿಗಾಗಿ “ದ ರೂರಲ್‌ ಮಿರರ್.ಕಾಂ ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

15 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago