ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ ಮೃತರ ಮನೆಗೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ ಮಾಡಿದ್ದರು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿ ಬಗ್ಗೆ ಜಿಲ್ಲಾ ವಲಯ ಅರಣ್ಯ ಅಧಿಕಾರಿ ರಮೇಶ್ ಬಾಬು ಮಾಹಿತಿ ನೀಡಿದ್ದು ಕಾಡಾನೆಗಳ ಸಂತತಿ ಇತ್ತಿಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು ನೀರು ಆಹಾರ ಅರಸಿ ಗ್ರಾಮಗಳ ಬಳಿ ಬರುತ್ತಿವೆ. ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ತಂಡ ಕಾರ್ಯನಿರ್ವಹಿಸುತ್ತಿದ್ದು ಮುತ್ತೋಡಿ ಅರಣ್ಯಕ್ಕೆ ಅನೆಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…