ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ ಮೃತರ ಮನೆಗೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಅವರು ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಣೆ ಮಾಡಿದ್ದರು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿ ಬಗ್ಗೆ ಜಿಲ್ಲಾ ವಲಯ ಅರಣ್ಯ ಅಧಿಕಾರಿ ರಮೇಶ್ ಬಾಬು ಮಾಹಿತಿ ನೀಡಿದ್ದು ಕಾಡಾನೆಗಳ ಸಂತತಿ ಇತ್ತಿಚಿನ ವರ್ಷಗಳಲ್ಲಿ ಹೆಚ್ಚಾಗಿದ್ದು ನೀರು ಆಹಾರ ಅರಸಿ ಗ್ರಾಮಗಳ ಬಳಿ ಬರುತ್ತಿವೆ. ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ತಂಡ ಕಾರ್ಯನಿರ್ವಹಿಸುತ್ತಿದ್ದು ಮುತ್ತೋಡಿ ಅರಣ್ಯಕ್ಕೆ ಅನೆಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…