Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?

October 27, 2023
10:26 AM
ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.

ರಾಜ್ಯ ಸರ್ಕಾರವು ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಕಠಿಣ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇದೀಗ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ, ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ನಗರ, ತುಮಕೂರು, ಕೊಪ್ಪ ಹಾಗೂ ಶಿವಮೊಗ್ಗ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ. ಯಾವುದೇ ಜೀವಿಯನ್ನು ಜೀವಂತವಾಗಿ ಅಥವಾ ಮೃತಪಟ್ಟ ಬಳಿಕ ಮಾರಾಟ ಮಾಡುವಂತಿಲ್ಲ. ಕಾಡು ಪ್ರಾಣಿಗಳ ಚರ್ಮವನ್ನು ಹದ ಮಾಡಿ ಅಲಂಕಾರಿಕ ವಸ್ತುಗಳಾಗಿ ಬಳಸುವಂತಿಲ್ಲ. ವನ್ಯಜೀವಿಗಳ ಮಾಂಸ ಮಾರಾಟ ಹಾಗೂ ಭಕ್ಷಣೆ ಸಹ ಅಪರಾಧ. ಹಾವಿನ ವಿಷವನ್ನೂ ಸಂಗ್ರಹ ಮಾಡುವಂತಿಲ್ಲ. ನವಿಲು ಗರಿಗಳನ್ನೂ ಸಂಗ್ರಹಿಸುವಂತಿಲ್ಲ. ವನ್ಯಜೀವಿಗಳ ಕೂದಲು, ಚರ್ಮ, ಉಗುರು, ಗೊರಸು, ಹಲ್ಲು, ಆನೆ ದಂತ ಸೇರಿದಂತೆ ದೇಹದ ಯಾವುದೇ ಭಾಗವನ್ನು ಸಂಗ್ರಹಿಸುವುದು, ಸಾಗಿಸುವುದು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

A high-level committee has been formed to create public awareness and to submit a comprehensive report on the measures to be taken to prevent the sale of products and items made from any organ of wildlife including tiger claws and tiger teeth.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror